Friday, July 11, 2025

ಮಾಣಿಲ ಕುಕ್ಕಾಜೆ: ಆಟಿದ ಅಂಗಣೊ

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ವಠಾರದಲ್ಲಿ 6ನೇ ವರ್ಷದ ಆಟಿದ ಅಂಗಣೊ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಜಾನಪದೀಯ ಆಟಿ ಕಳೆಂಜನ ಕುಣಿತದ ಬಳಿಕ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶ್ರೀಕೃಷ್ಣ ಗುರೂಜಿ ಉದ್ಘಾಟಿಸಿದರು.
ಬಳಿಕ ತುಳು ಜಾನಪದಕ್ಕೆ ಸಂಬಂಧಿಸಿದ ನಾನಾ ಸ್ಪರ್ಧೆಗಳು ನಡೆದವು. ಮಧ್ಯಾಹ್ನ ಆಟಿ ತಿಂಗಳ ವಿಶೇಷ ತಿಂಡಿ, ತಿನಿಸುಗಳನ್ನೊಳಗೊಂಡ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ತುಳುನಾಡ ಪಾಡ್ದನ ಎಂಬ ವಿಶೇಷ ಕಾರ್ಯಕ್ರಮವು ಕಾಸರಗೋಡು ಕನ್ಯಪ್ಪಾಡಿ ಬೊಳಿಕೆ ಜಾನಪದ ತಂಡದ ಕಲಾವಿದರಿಂದ ಪ್ರದರ್ಶನಗೊಂಡಿತು.
ಸಮಾರೋಪ ಸಮಾರಂಭವನ್ನು ಶ್ರೀ ಶಂಕರ ಸ್ವಾಮಿ ಕೃಪಾ ಕನ್ಯಪ್ಪಾಡಿ ಉದ್ಘಾಟಿಸಿದರು. ಶ್ರೀ ಕ್ಷೇತ್ರದ ಮೊಕ್ತೇಸರ ಎಂ.ಕೆ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರು ಆಶೀರ್ವಚನ ನೀಡಿದರು.
ಗುಡ್ಡಪ್ಪ ಸುವರ್ಣ ಪಂಜ, ಕಿರಣ್ ಉಳ್ಳಾಲ, ಶ್ರೀಧರ ಬಾಳೆಕಲ್ಲು, ಜಯರಾಮ ಕುಲಾಲ್ ಡೆಂಬಲ, ಸಂಕಪ್ಪ ಸುವರ್ಣ ಬಾಡೂರು, ನಳಿನಾಕ್ಷಿ ಕಾಮಜಾಲು ಉಪಸ್ಥಿತರಿದ್ದರು.
ಸ್ಪರ್ಧೆಯ ನಿರ್ಣಾಯಕರಾಗಿ ಐತ್ತಪ್ಪ ಬಾಳೆಕಲ್ಲು, ಸಂಜೀವ ಪಳನೀರು, ಮತ್ತಿತರರು ಸಹಕರಿಸಿದರು. ಸ್ಪರ್ಧಾ ವಿಜೇತರ ವಿವರಣೆಯನ್ನು ಮಹೇಶ್ ಕುಕ್ಕಾಜೆ ವಾಚಿಸಿದರು. ರವಿ ಎಸ್. ಎಂ ಕುಕ್ಕಾಜೆ ಸ್ವಾಗತಿಸಿದರು. ಲಿಖಿತ್ ಅಡ್ಕ ಮಾಣಿಲ ವಂದಿಸಿದರು. ಗಿರೀಶ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

 

More from the blog

ಬಂಟ್ವಾಳದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಮತ್ತು ಅರಿವು ಕಾರ್ಯಕ್ರಮ.. 

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಛೇರಿ, ಬಂಟ್ವಾಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ಬಂಟ್ವಾಳ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ...

ಗುರುಪೂರ್ಣಿಮಾ ಪ್ರಯುಕ್ತ ಅಮ್ಟೂರಿನಲ್ಲಿ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾದ ದಿನೇಶ್ ಆಮ್ಟೂರು ಇವರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಥಮಿಕ ಶಿಕ್ಷಣವನ್ನು ಮಾಡಲು ಪ್ರೇರಣೆ ಕೊಟ್ಟಂತಹ ಗುರುಗಳಾದ ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರದ ಮುಖ್ಯೋಪಾಧ್ಯಾಯರಾದ...

ಗುರುಪೂರ್ಣಿಮಾ ಪ್ರಯುಕ್ತ ಪ್ರಸೂತಿ ತಜ್ಞೆ ವೆಂಕಮ್ಮರಿಗೆ ಬಿಜೆಪಿ ವತಿಯಿಂದ ಗೌರವರ್ಪಣೆ..

ಬಂಟ್ವಾಳ : ತಾಲೂಕಿನ ಕೊಡಂಬೆಟ್ಟು ಪರಿಸರದಲ್ಲಿ ನೂರಾರು ಮಂದಿಗಳ ಬಾಳಿನಲ್ಲಿ ಬೆಳಕು ಪ್ರಜ್ವಲಿಸಿದ ಪ್ರಸೂತಿ ತಜ್ಞೆ ವೆಂಕಮ್ಮ ಎಂಬವರಿಗೆ ಗುರು ಪೂರ್ಣಿಮಾ ದಿನಾಚರಣೆಯ ಪ್ರಯುಕ್ತ. ಬಿಜೆಪಿ ವತಿಯಿಂದ ಪಕ್ಷದ ನಾಯಕಿ ಸುಲೋಚನ ಜಿ....

ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ, ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಸಾಮೂಹಿಕ ವಿವಾಹ..

ಬಂಟ್ವಾಳ : ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ (ಅಬುದಾಬಿ), ಹ್ಯಾಪಿ ಸ್ಟಾರ್ ಗ್ರೂಪ್ ಇವರ ವತಿಯಿಂದ ಜುಲೈ 13 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಹಾಲ್ ನಲ್ಲಿ ನಡೆಯಲಿರುವ ಕೆ.ಪಿ.ಸುಲೈಮಾನ್ ಹಾಜಿ ಕನ್ಯಾನ...