Wednesday, February 12, 2025

ಮಾಣಿಲ ಕುಕ್ಕಾಜೆ: ಆಟಿದ ಅಂಗಣೊ

ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ವಠಾರದಲ್ಲಿ 6ನೇ ವರ್ಷದ ಆಟಿದ ಅಂಗಣೊ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಜಾನಪದೀಯ ಆಟಿ ಕಳೆಂಜನ ಕುಣಿತದ ಬಳಿಕ ನಡೆದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಶ್ರೀಕೃಷ್ಣ ಗುರೂಜಿ ಉದ್ಘಾಟಿಸಿದರು.
ಬಳಿಕ ತುಳು ಜಾನಪದಕ್ಕೆ ಸಂಬಂಧಿಸಿದ ನಾನಾ ಸ್ಪರ್ಧೆಗಳು ನಡೆದವು. ಮಧ್ಯಾಹ್ನ ಆಟಿ ತಿಂಗಳ ವಿಶೇಷ ತಿಂಡಿ, ತಿನಿಸುಗಳನ್ನೊಳಗೊಂಡ ಊಟದ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು. ತುಳುನಾಡ ಪಾಡ್ದನ ಎಂಬ ವಿಶೇಷ ಕಾರ್ಯಕ್ರಮವು ಕಾಸರಗೋಡು ಕನ್ಯಪ್ಪಾಡಿ ಬೊಳಿಕೆ ಜಾನಪದ ತಂಡದ ಕಲಾವಿದರಿಂದ ಪ್ರದರ್ಶನಗೊಂಡಿತು.
ಸಮಾರೋಪ ಸಮಾರಂಭವನ್ನು ಶ್ರೀ ಶಂಕರ ಸ್ವಾಮಿ ಕೃಪಾ ಕನ್ಯಪ್ಪಾಡಿ ಉದ್ಘಾಟಿಸಿದರು. ಶ್ರೀ ಕ್ಷೇತ್ರದ ಮೊಕ್ತೇಸರ ಎಂ.ಕೆ ಕುಕ್ಕಾಜೆ ಅಧ್ಯಕ್ಷತೆ ವಹಿಸಿದ್ದರು ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರು ಆಶೀರ್ವಚನ ನೀಡಿದರು.
ಗುಡ್ಡಪ್ಪ ಸುವರ್ಣ ಪಂಜ, ಕಿರಣ್ ಉಳ್ಳಾಲ, ಶ್ರೀಧರ ಬಾಳೆಕಲ್ಲು, ಜಯರಾಮ ಕುಲಾಲ್ ಡೆಂಬಲ, ಸಂಕಪ್ಪ ಸುವರ್ಣ ಬಾಡೂರು, ನಳಿನಾಕ್ಷಿ ಕಾಮಜಾಲು ಉಪಸ್ಥಿತರಿದ್ದರು.
ಸ್ಪರ್ಧೆಯ ನಿರ್ಣಾಯಕರಾಗಿ ಐತ್ತಪ್ಪ ಬಾಳೆಕಲ್ಲು, ಸಂಜೀವ ಪಳನೀರು, ಮತ್ತಿತರರು ಸಹಕರಿಸಿದರು. ಸ್ಪರ್ಧಾ ವಿಜೇತರ ವಿವರಣೆಯನ್ನು ಮಹೇಶ್ ಕುಕ್ಕಾಜೆ ವಾಚಿಸಿದರು. ರವಿ ಎಸ್. ಎಂ ಕುಕ್ಕಾಜೆ ಸ್ವಾಗತಿಸಿದರು. ಲಿಖಿತ್ ಅಡ್ಕ ಮಾಣಿಲ ವಂದಿಸಿದರು. ಗಿರೀಶ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

 

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...