Friday, January 30, 2026

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಬಂಟ್ವಾಳ: ಬಸ್ ನಲ್ಲಿ ಹೃದಯಾಘಾತಗೊಂಡು ಸಾವನ್ನಪ್ಪಿದ ಘಟನೆ ಇದೀಗ ಬಿಸಿರೋಡಿನ ಲ್ಲಿ ಬೆಳಕಿಗೆ ಬಂದಿದೆ.


ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ ನಲ್ಲಿ ಈ ಘಟನೆ ನಡೆದಿದೆ.
ಸುಮಾರು ( 55)ವರ್ಷ ವಯಸ್ಸಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಬಂಟ್ವಾಳ ನಗರ ಠಾಣಾ ಸಮೀಪ ಸ್ಟೇಟ್ ಬ್ಯಾಂಕ್ ಬಳಿ ಬಸ್ ನಿಲ್ಲಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ಪೋಲೀಸರು ಬಸ್ ಬಳಿ ಬಂದು ವಿಚಾರಣೆ ನಡೆಸುತ್ತಿದ್ದಾರೆ.
ಇವರು ಎಲ್ಲಿ ಯವರು ಯಾವ ಕಡೆಗೆ ತೆರಳುತ್ತಿದ್ದರು ಎಂಬುದು ಇನ್ನಷ್ಟೆ ತಿಳಿಯ ಬೇಕಾಗಿದೆ.
ಇವರು ಮೈಸೂರಿನಿಂದ ಒಬ್ಬರೇ ಬಸ್ ಗೆ ಹತ್ತಿದ್ದರು.
ಬಸ್ ಸೀಟಿನಲ್ಲಿ ಕುಳಿತು ಕೊಂಡು ಕಿವಿಗೆ ಮೊಬೈಲ್ ಇಯರ್ ಪೋನ್ ಅಳವಡಿಸಿ ಮಲಗಿದ ಸ್ಥಿತಿಯಲ್ಲಿ ಇದ್ದಾರೆ.
ಯಾರೋ ಪ್ರಯಾಣಿಕರಿಗೆ ಸಂಶಯ ಬಂದು ನೋಡಿದಾಗ ಗಮನಕ್ಕೆ ಬಂದಿದೆ.
ಇವರು ಪಾಣೆಮಂಗಳೂರು ವರೆಗೂ ಮಾತನಾಡಿಕೊಂಡು ಬರುತ್ತಿದ್ದರು.ಇದ್ದಕ್ಕಿದ್ದಂತೆ ಇವರ ಮೊಬೈಲ್ ಕೆಳಗೆ ಬಿತ್ತಿ ಬಳಿಕ ನೋಡಿದಾಗ ಇವರು ಸಾವನ್ನಪ್ಪಿದ ಬಗ್ಗೆ ಸಂಶಯ ಬಂದು ಬಸ್ ನಿರ್ವಾಹಕನಿಗೆ ಸಹ ಪ್ರಯಾಣಿಕರು ತಿಳಿಸಿದ್ದಾರೆ.
ಅವರು ಬಿಸಿರೋಡು ವರಗೆ ಬಂದು ಠಾಣೆ ಗೆ ದೂರು ನೀಡಿದ್ದಾರೆ.

ಬಂಟ್ವಾಳ ನಗರ ಠಾಣಾ ಎಸ್ ಐ ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಎಸ್.ಐ. ಸುಧಾಕರ ತೋನ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೋಲೀಸರ ತನಿಖೆಯ ವೇಳೆ ಮೃತರ ಬಳಿ ಅದಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ಮಂಜುನಾಥ್ ಭಟ್ ಬೆಳಗಾಂ ನ ಅಥನಿ ಎಂದು ವಿಳಾಸ ಸಿಕ್ಕಿದೆ ಎಂದು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ತಿಳಿಸಿದ್ದಾರೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...