Monday, February 10, 2025

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಬಂಟ್ವಾಳ: ಬಸ್ ನಲ್ಲಿ ಹೃದಯಾಘಾತಗೊಂಡು ಸಾವನ್ನಪ್ಪಿದ ಘಟನೆ ಇದೀಗ ಬಿಸಿರೋಡಿನ ಲ್ಲಿ ಬೆಳಕಿಗೆ ಬಂದಿದೆ.


ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ ನಲ್ಲಿ ಈ ಘಟನೆ ನಡೆದಿದೆ.
ಸುಮಾರು ( 55)ವರ್ಷ ವಯಸ್ಸಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.
ಬಂಟ್ವಾಳ ನಗರ ಠಾಣಾ ಸಮೀಪ ಸ್ಟೇಟ್ ಬ್ಯಾಂಕ್ ಬಳಿ ಬಸ್ ನಿಲ್ಲಿಸಿದ್ದಾರೆ.
ಬಂಟ್ವಾಳ ನಗರ ಠಾಣಾ ಪೋಲೀಸರು ಬಸ್ ಬಳಿ ಬಂದು ವಿಚಾರಣೆ ನಡೆಸುತ್ತಿದ್ದಾರೆ.
ಇವರು ಎಲ್ಲಿ ಯವರು ಯಾವ ಕಡೆಗೆ ತೆರಳುತ್ತಿದ್ದರು ಎಂಬುದು ಇನ್ನಷ್ಟೆ ತಿಳಿಯ ಬೇಕಾಗಿದೆ.
ಇವರು ಮೈಸೂರಿನಿಂದ ಒಬ್ಬರೇ ಬಸ್ ಗೆ ಹತ್ತಿದ್ದರು.
ಬಸ್ ಸೀಟಿನಲ್ಲಿ ಕುಳಿತು ಕೊಂಡು ಕಿವಿಗೆ ಮೊಬೈಲ್ ಇಯರ್ ಪೋನ್ ಅಳವಡಿಸಿ ಮಲಗಿದ ಸ್ಥಿತಿಯಲ್ಲಿ ಇದ್ದಾರೆ.
ಯಾರೋ ಪ್ರಯಾಣಿಕರಿಗೆ ಸಂಶಯ ಬಂದು ನೋಡಿದಾಗ ಗಮನಕ್ಕೆ ಬಂದಿದೆ.
ಇವರು ಪಾಣೆಮಂಗಳೂರು ವರೆಗೂ ಮಾತನಾಡಿಕೊಂಡು ಬರುತ್ತಿದ್ದರು.ಇದ್ದಕ್ಕಿದ್ದಂತೆ ಇವರ ಮೊಬೈಲ್ ಕೆಳಗೆ ಬಿತ್ತಿ ಬಳಿಕ ನೋಡಿದಾಗ ಇವರು ಸಾವನ್ನಪ್ಪಿದ ಬಗ್ಗೆ ಸಂಶಯ ಬಂದು ಬಸ್ ನಿರ್ವಾಹಕನಿಗೆ ಸಹ ಪ್ರಯಾಣಿಕರು ತಿಳಿಸಿದ್ದಾರೆ.
ಅವರು ಬಿಸಿರೋಡು ವರಗೆ ಬಂದು ಠಾಣೆ ಗೆ ದೂರು ನೀಡಿದ್ದಾರೆ.

ಬಂಟ್ವಾಳ ನಗರ ಠಾಣಾ ಎಸ್ ಐ ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಎಸ್.ಐ. ಸುಧಾಕರ ತೋನ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೋಲೀಸರ ತನಿಖೆಯ ವೇಳೆ ಮೃತರ ಬಳಿ ಅದಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ಮಂಜುನಾಥ್ ಭಟ್ ಬೆಳಗಾಂ ನ ಅಥನಿ ಎಂದು ವಿಳಾಸ ಸಿಕ್ಕಿದೆ ಎಂದು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ತಿಳಿಸಿದ್ದಾರೆ.

More from the blog

ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಡೆಯಿತು ಪೂರ್ವಭಾವಿ ಸಭೆ

ಬಂಟ್ವಾಳ:  ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿ ಇಲ್ಲಿ ನಡೆಯುವ ಶತಚಂಡಿಕಯಾಗದ ಹಾಗೂ ಕುಪ್ಪೆಟ್ಟು ಬರ್ಕೆ ಕರ್ಪೆ ಪ್ರತಿಷ್ಠಾ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಕಡೆಗುಂಡ್ಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್...

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...