Thursday, June 26, 2025

ಬ್ರೇಕಿಂಗ್ : ಅಯೋಧ್ಯೆಯಲ್ಲಿ ರಾಮಮಂದಿರ ಫಿಕ್ಸ್‌ , ‘ಸುಪ್ರೀಂ ಕೋರ್ಟ್‌ ನಿಂದ ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟ’

ನವದೆಹಲಿ: ಅಯೋಧ್ಯೆ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯ್, ನ್ಯಾಯಮೂರ್ತಿ ಎಸ್‍ಎ ಬೋಬ್ಡೆ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ಕರ್ನಾಟಕ ಮೂಲದ ನ್ಯಾಯಮೂರ್ತಿ ಅಬ್ದುಲ್ ನಜೀರ್ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್ ಪೀಠ ಬೆಳಗ್ಗೆ 10.30ಕ್ಕೆ ತನ್ನ ತೀರ್ಪನ್ನು ಪ್ರಕಟಿಸಿದೆ.
ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್‌ ನಿಂದ ‘ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಅಯೋಧ್ಯೆಯಲ್ಲಿ ರಾಮ ಮಂದಿರನ್ನು ಕಟ್ಟುವ ಕೆಲಸವನ್ನು ಸರಕಾರಕ್ಕೆ ನೀಡಿದೆ.
ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಿತ್ತು. 40 ದಿನಗಳ ಕಾಲ ನಿರಂತರ ವಿಚಾರಣೆ ನಡೆಸಿದ ಸಂವಿಧಾನ ಪೀಠ ಅಕ್ಟೋಬರ್ 16ಕ್ಕೆ ವಿಚಾರಣೆ ಪೂರ್ಣಗೊಳಿಸಿ ಇಂದಿಗೆ ಆದೇಶ ಕಾಯ್ದಿರಿಸಿತ್ತು. ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು ಪರಿಹರಿಸಿಕೊಳ್ಳಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಫ್‍ ಎಂ ಐ ಕಲಿಫುಲ್ಲಾ, ಧರ್ಮಗುರು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಹಾಗೂ ಹಿರಿಯ ವಕೀಲ ಶ್ರೀರಾಮ್ ಮಂಚು ಅವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಆದರೆ ಈ ವಿವಾದವನ್ನು ಬಗೆಹರಿಸಲು ಸಮಿತಿ ವಿಫಲವಾದ ಹಿನ್ನೆಲೆಯಲ್ಲಿ ಸಂವಿಧಾನ ಪೀಠ ದಿನನಿತ್ಯ ವಿಚಾರಣೆ ನಡೆಸಿತ್ತು.
ನ್ಯಾಯಾಪೀಠ ಇಂದು ಏನು ಹೇಳಿತು?
2010ರಲ್ಲಿ ಅಲಹಾಬಾದ್ ಕೋರ್ಟ್ ತೀರ್ಪೆನು?
ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಜಾಗ ಸಮಾನ ಹಂಚಿಕೆ ಮಾಡಿತ್ತು. ವಿವಾದಿತ 2.77 ಎಕರೆಗ ಭೂಮಿ 3 ಭಾಗಗಳಾಗಿ ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾರಾ, ರಾಮ್‍ಲಲ್ಲಾಗೆ ಸಮಾನ ಹಂಚಿಕೆ ಮಾಡಿತ್ತು.

ಬಹುತೇಕ ರಾಜ್ಯಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ತೀರ್ಪು ಏನೇ ಬಂದರೂ ಸರಿ ಶಾಂತಿ, ಸಂಯಮದಿಂದ ಇರಬೇಕು. ಯಾವುದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು ಎಂದು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ರಾಜ್ಯದಲ್ಲೂ ಸಹ ಖಾಕಿ ಪಡೆ ಅಲರ್ಟ್​ ಆಗಿದ್ದು ಕೊಡ ಎಲ್ಲ ಜಿಲ್ಲೆಗಳಲ್ಲೂ ಸೂಕ್ತ ಭದ್ರತೆ ಒದಗಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಸಹ ಪ್ರಚೋದನಾತ್ಮಕ ಪೋಸ್ಟ್​ಗಳನ್ನು ಹಾಕಬಾರದು ಎಂದು ಆಯಾ ಜಿಲ್ಲಾಧಿಕಾರಿಗಳು ಕಡಕ್​ ಸೂಚನೆ ನೀಡಿದ್ದಾರೆ.

More from the blog

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...