ಬಂಟ್ವಾಳ: ಭಾರತೀಯ ಜನತಾ ಪಾರ್ಟಿ, ರೈತಮೋರ್ಚಾ ಬಂಟ್ವಾಳ ಕ್ಷೇತ್ರ, ಕೊಳ್ನಾಡು ಬಿ.ಜೆ.ಪಿ ಇದರ ನೇತೃತ್ವದಲ್ಲಿ ಭಾರತ ಸರಕಾರದ ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಕಾರ್ಡ್ ನೋಂದಾವಣೆಯು ಕೊಳ್ನಾಡು ಗ್ರಾಮದ ಸಾಲೆತ್ತೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.


ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿ ನೀಡಿ ಆಯುಷ್ಮಾನ್ ಕಾರ್ಡ್ ನೋಂದಾವಣೆಯ ಪ್ರಗತಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಕುಲ್ಯಾರು ನಾರಾಯಣ ಶೆಟ್ಟಿ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಕ್ಷೇತ್ರ ರೈತ ಮೋರ್ಚಾ ಅಧ್ಯಕ್ಷ ವಿಶ್ವನಾಥ್ ಪೂಜಾರಿ, ಕ್ಷೇತ್ರ ಬಿಜೆಪಿ ಸದಸ್ಯ ಬಾಲಕೃಷ್ಣ ಸೆರ್ಕಳ, ಕ್ಷೇತ್ರ ರೈತ ಮೋರ್ಚಾ ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಅಗರಿ, ಕ್ಷೇತ್ರ ಬಿಜೆಪಿ ಉಪಾಧ್ಯಕ್ಷ ಜಯರಾಮ್ ನಾಯ್ಕ್ ಕುಂಟ್ರಕಲ, ಕ್ಷೇತ್ರ ಬಿಜೆಪಿ ಸದಸ್ಯ ಬಾಲಕೃಷ್ಣ ಸೆರ್ಕಳ, ಕೊಳ್ನಾಡು ಮಹಾಶಕ್ತಿಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಹಿತ್, ಶಕ್ತಿಕೇಂದ್ರ ಪ್ರಮುಖ್ ವೇಣುಗೋಪಾಲ್ ಮಂಕುಡೆ, ಪಕ್ಷದ ಕಾರ್ಯಕರ್ತರಾದ ಗಂಗಾಧರ್ ಆಚಾರ್ಯ, ಸದಾನಂದ ಶೆಟ್ಟಿ ಅಗರಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.












