Monday, January 26, 2026

ಬಂಟರ ಸಂಘ ಬಂಟ್ವಾಳ ತಾಲೂಕು ಯುವ ವಿಭಾಗದ ವತಿಯಿಂದ ದೀಪಾವಳಿ ಹಬ್ಬ ಪ್ರಯುಕ್ತ ಬೊಲ್ಪುದ ಐಸಿರ

ಬಂಟರ ಸಂಘ ಬಂಟ್ವಾಳ ತಾಲೂಕು ಯುವ ವಿಭಾಗದ ವತಿಯಿಂದ ದೀಪಾವಳಿ ಪ್ರಯುಕ್ತ ಬೊಲ್ಪುದ ಐಸಿರ ಎಂಬ ತುಳುವ ಸಾಂಪ್ರದಾಯಿಕ ಸೊಗಡಿನೊಂದಿಗೆ ಹಮ್ಮಿಕೊಂಡಿರುವ ವೈವಿಧ್ಯಮಯ ವೈಶಿಷ್ಟಪೂರ್ಣ ಕಾರ್ಯಕ್ರಮ ನಿನ್ನೆ ಬಂಟರ ಭವನದಲ್ಲಿ ಜರಗಿತು.


ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ರವರು ದೀಪ ಬೆಳಗಿಸಿ ಬಲಿಂದ್ರ ಕರೆಯುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಬಳಿಕ ಆಕಾಶ ಬುಟ್ಟಿ ಗಳನ್ನು ಹಾರಿಸುವ ಮೂಲಕ ವೇದಿಕೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬಂಟರ ಸಂಘ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಚಂದ್ರಹಾಸ್ ಡಿ ಶೆಟ್ಟಿ, ಪ್ರದಾನ ಕಾರ್ಯದರ್ಶಿ ಜಗನ್ನಾಥ ಚೌಟ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಳ, ಜತೆ ಕೋಶಾಧಿಕಾರಿ ಪ್ರಫುಲ್ಲ ರೈ, ಜತೆ ಕಾರ್ಯದರ್ಶಿ ರಂಜಾನ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ರಮಾ ಭಂಡಾರಿ, ಯುವ ವಿಭಾಗದ ಅಧ್ಯಕ್ಷರಾದ ನಿಶಾನ್ ಆಳ್ವ, ಉಪಾಧ್ಯಕ್ಷರಾದ ಕರುಣ್ ಶೆಟ್ಟಿ, ಕಾರ್ಯದರ್ಶಿ ಗೋಕುಲ್ ಶೆಟ್ಟಿ ಕೋಶಾಧಿಕಾರಿ ಶುಭಕರ ಶೆಟ್ಟಿ, ಜತೆ ಕಾರ್ಯದರ್ಶಿ ದೀಪಕ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

ದೀಪಾವಳಿ ಸಡಗರದ ಪಟಾಕಿ ಹಬ್ಬ , ಚೆಂಡೆ ತಾಳ ಗಳ ಜೊತೆ ಅಬ್ಬರದ ಕುಣಿತ , ನುರಿತ ಕಲಾವಿದರಿಂದ ಗಾನ- ನಾಟ್ಯ – ವೈಭವ , ದಾಂಡಿಯಾ ನೃತ್ಯ , ಎಲ್ಲಾ ವಲಯದಿಂದ ರಂಗೋಲಿ ರಚನೆ ಮತ್ತಿ ಹಣತೆ ಚಿತ್ತಾರ ಸ್ಪರ್ಧೆ ಮತ್ತು ಪ್ರದರ್ಶನ ನಡೆಯಿತು

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...