Wednesday, January 28, 2026

ಬಿ.ಸಿ.ರೋಡ್ ನ್ಯಾಯಾಲಯ, ಪೊಲೀಸ್ ಠಾಣೆಗೆ ತಾತ್ಕಾಲಿಕ ಬದಲಿ ರಸ್ತೆ

ಬಂಟ್ವಾಳ: ಬಿ.ಸಿ.ರೋಡ್ ಮೇಲ್ಸೇತುವೆಯಿಂದ ಕೈಕುಂಜೆವರೆಗೆ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಬಿ.ಸಿ.ರೋಡ್ ನ್ಯಾಯಾಲಯ ಮತ್ತು ಪೊಲೀಸ್ ಠಾಣೆಗೆ ಈಗಿರುವ ರಸ್ತೆ ಬಂದ್ ಆಗಿದ್ದು ತಾತ್ಕಾಲಿಕವಾಗಿ ಬದಲಿ ರಸ್ತೆಯನ್ನು ನಿರ್ಮಿಸಲಾಗಿದೆ.

ಮಂಗಳೂರು ಕಡೆಗೆ ಸಂಚಾರಿಸುವ ಬಸ್ಸುಗಳು ಬಿ.ಸಿ.ರೋಡಿನಲ್ಲಿ ನಿಲ್ಲುವ ಸ್ಥಳದಿಂದ ನ್ಯಾಯಾಲಯ ಮತ್ತು ಪೊಲೀಸ್ ಠಾಣೆಗೆ ಸಂಚರಿಸಲು ರಸ್ತೆಯನ್ನು ಕಲ್ಪಿಸಲಾಗಿದೆ. ಇದೀಗ ಕೋರ್ಟ್ ಹಾಗೂ ಬಂಟ್ವಾಳ ನಗರ ಪೊಲೀಸ್ ಠಾಣೆ, ಡಿವೈಎಸ್ಪಿ ಕಚೇರಿಗೆ ಬರಬೇಕಾದರೆ, ಸರ್ವೀಸ್ ರಸ್ತೆಯ ಪಕ್ಕ ಮಾಡಿದ ದಾರಿಯಿಂದ ಆಗಮಿಸಬೇಕಾಗುತ್ತದೆ.

ಬಿ.ಸಿ.ರೋಡ್ ಕೈಕುಂಜೆ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ಮಿನಿ ವಿಧಾನಸೌಧದ ಪಾರ್ಶ್ವದಲ್ಲಿರುವ ಜಾಗದ ಕಾಂಕ್ರೀಟ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಬಿ.ಸಿ.ರೋಡ್ ಭೂ ಅಭಿವೃದ್ಧಿ ಬ್ಯಾಂಕ್ ಎದುರಿನಿಂದ ಮಿನಿ ವಿಧಾನಸೌಧದ ವರೆಗೆ 190 ಮೀಟರ್ ರಸ್ತೆ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯಾಗುತ್ತಿದೆ, ಮಾರ್ಚ್ 3ರಂದು ಈ ರಸ್ತೆ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಶಿಲಾನ್ಯಾಸ ನೆರವೇರಿಸಿದ್ದರು. 190 ಮೀಟರ್ ರಸ್ತೆ ಅಭಿವೃದ್ಧಿಗೊಳ್ಳಲಿದೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...