Wednesday, February 12, 2025

ಬಾಕಿಲಗುತ್ತು: ಇಂದು ನಾಗ ದೇವರ, ಶ್ರೀ ದೈವಗಳ, ಬ್ರಹ್ಮ ಬೈದೇರುಗಳ ಪ್ರತಿಷ್ಠೆ

ವಿಟ್ಲ: ಅನಂತಾಡಿ ಬಾಕಿಲಗುತ್ತು ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರ, ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಬೆರ್ಮೆರ್ ಬೈದೇರುಗಳು ಹಾಗೂ ಇತರ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಗುರುವಾರ ಶ್ರೀ ಕ್ಷೇತ್ರದಲ್ಲಿ ಪ್ರಾತಃ ಕಾಲ ಗಣಪತಿ ಹವನದ ಬಳಿಕ ಮುಂಜಾನೆ 7.50 ಸುಮೂಹೂರ್ತದಿಂದ 11.30 ರ ತನಕ ಕುಂಭ ಲಗ್ನ ಹಾಗೂ ಮೀನ ಲಗ್ನದಲ್ಲಿ ಶ್ರೀ ನಾಗದೇವರ ಪುನರ್ ಪ್ರತಿಷ್ಠೆ, ರಕ್ತೇಶ್ವರಿ, ಉಳ್ಳಾಲ್ತಿ, ಹೊಸಮ್ಮ, ವೈದ್ಯನಾಥೇಶ್ವರ ಸಾನ್ನಿಧ್ಯಗಳ ಪ್ರತಿಷ್ಠಾಪನೆ, ಕಲಶಾಭಿಷೇಕ ಹಾಗೂ ಎಲ್ಲಾ ಪರಿವಾರ ದೈವಗಳ ಪ್ರತಿಷ್ಠೆ, ನಾಗದೇವರ, ಸನ್ನಿಧಿಯಲ್ಲಿ ಕಲಶಾಭಿಷೇಕ, ಆಶ್ಲೇಷಾ ಪೂಜೆ, ಮಹಾಪೂಜೆ ನಡೆಯಲಿದೆ.
ಬ್ರಹ್ಮ ಬೈದೇರುಗಳ ಗರೋಡಿಯಲ್ಲಿ ಪ್ರಾತಃಕಾಲ 3.30 ರ ಬ್ರಾಹ್ಮೀ ಮುಹೂರ್ತದಲ್ಲಿ ಆರಂಭಗೊಂಡು ಕುಂಭ ಸ್ಥಾಪನೆ, ಕುಂಭ ಪೂಜೆ, ಆದ್ಯ ಗಣಯಾಗ, ಶಿಖರ ಪ್ರತಿಷ್ಠೆಯ ಬಳಿಕ ಮುಂಜಾನೆ 9.37 ರ ಮೀನ ಲಗ್ನದ ಸುಮುಹೂರ್ತದಲ್ಲಿ ಬೆರ್ಮೆರ್ ಬೈದೇರುಗಳ ಹಾಗೂ ದೇರಬೈದ್ಯ ಗುರುಪೀಠ ಪ್ರತಿಷ್ಠೆ, ಪ್ರತಿಷ್ಠಾ ಹೋಮ ನಡೆಯಲಿದೆ.
108 ಕಲಶಗಳ ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಮಹಾ ಮಂತ್ರಾಕ್ಷತೆಯ ಬಳಿಕ ಮಧ್ಯಾಹ್ನ 12.30 ಕ್ಕೆ ಬೈದೇರುಗಳ ದರ್ಶನ ನಡೆಯಲಿದೆ.
ಸಂಜೆ ಶ್ರೀ ವೈದ್ಯನಾಥೇಶ್ವರ ಹಾಗೂ ಪರಿವಾರ ದೈವಗಳ ಸನ್ನಿಧಿಯಲ್ಲಿ ಕಲಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಉಳ್ಳಾಲ್ತಿ, ಹೊಸಮ್ಮ ಸನ್ನಿಧಿಯಲ್ಲಿ ಕಲಶಪೂಜೆ, ಸಪ್ತಶತೀ ಪಾರಾಯಣ ಸಮಾಪ್ತಿಯಾಗಲಿದೆ.
ರಾತ್ರಿ ನಡೆಯುವ ಧಾರ್ಮಿಕ ಸಭೆಯಲ್ಲಿ ಕನ್ಯಾನ ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ಚಿತ್ತರಂಜನ್ ಕಂಕನಾಡಿ ಅಧ್ಯಕ್ಷತೆ ವಹಿಸಲಿದ್ದು, ನಾನಾ ಕ್ಷೇತ್ರಗಳ ಗಣ್ಯ, ಮಹನೀಯರು ಭಾಗವಹಿಸಲಿದ್ದಾರೆ.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...