Thursday, February 13, 2025

ಬಾಕಿಲಗುತ್ತು: ನಾಗ ದೇವರ, ಶ್ರೀ ದೈವಗಳ, ಬ್ರಹ್ಮ ಬೈದೇರುಗಳ ಪ್ರತಿಷ್ಠೆ, ಕಲಶಾಭಿಷೇಕ

ವಿಟ್ಲ: ಅನಂತಾಡಿ ಬಾಕಿಲಗುತ್ತು ಕ್ಷೇತ್ರದಲ್ಲಿ ಶ್ರೀ ಉಳ್ಳಾಲ್ತಿ, ವೈದ್ಯನಾಥೇಶ್ವರ, ಹೊಸಮ್ಮ, ಅಣ್ಣಪ್ಪ ಪಂಜುರ್ಲಿ, ಬೆರ್ಮೆರ್ ಬೈದೇರುಗಳು ಹಾಗೂ ಇತರ ಪರಿವಾರ ದೈವಗಳ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಗುರುವಾರ ಶ್ರೀ ಕ್ಷೇತ್ರದಲ್ಲಿ ಪ್ರಾತಃ ಕಾಲ ಗಣಪತಿ ಹವನದ ಬಳಿಕ ಮುಂಜಾನೆ 7.50 ಸುಮೂಹೂರ್ತದಿಂದ೧೧.೩೦ ರ ತನಕ ಕುಂಭ ಲಗ್ನ ಹಾಗೂ ಮೀನ ಲಗ್ನದಲ್ಲಿ ಶ್ರೀ ನಾಗದೇವರ ಪುನರ್ ಪ್ರತಿಷ್ಠೆ, ರಕ್ತೇಶ್ವರಿ, ಉಳ್ಳಾಲ್ತಿ, ಹೊಸಮ್ಮ, ವೈದ್ಯನಾಥೇಶ್ವರ ಸಾನ್ನಿಧ್ಯಗಳ ಪ್ರತಿಷ್ಠಾಪನೆ, ಕಲಶಾಭಿಷೇಕ ಹಾಗೂ ಎಲ್ಲಾ ಪರಿವಾರ ದೈವಗಳ ಪ್ರತಿಷ್ಠೆ, ನಾಗದೇವರ, ಸನ್ನಿಧಿಯಲ್ಲಿ ಕಲಶಾಭಿಷೇಕ, ಆಶ್ಲೇಷಾ ಪೂಜೆ, ಮಹಾಪೂಜೆ ನಡೆಯಲಿದೆ.
ಬ್ರಹ್ಮ ಬೈದೇರುಗಳ ಗರೋಡಿಯಲ್ಲಿ ಪ್ರಾತಃಕಾಳ 3.30 ರ ಬ್ರಾಹ್ಮೀ ಮುಹೂರ್ತದಲ್ಲಿ ಆರಂಭಗೊಂಡು ಕುಂಭ ಸ್ಥಾಪನೆ, ಕುಂಭ ಪೂಜೆ, ಆದ್ಯ ಗಣಯಾಗ, ಶಿಖರ ಪ್ರತಿಷ್ಠೆಯ ಬಳಿಕ ಮುಂಜಾನೆ 9.37 ರ ಮೀನ ಲಗ್ನದ ಸುಮುಹೂರ್ತದಲ್ಲಿ ಬೆರ್ಮೆರ್ ಬೈದೇರುಗಳ ಹಾಗೂ ದೇರಬೈದ್ಯ ಗುರುಪೀಠ ಪ್ರತಿಷ್ಠೆ, ಪ್ರತಿಷ್ಠಾ ಹೋಮ ನಡೆಯಿತು.
108 ಕಲಶಗಳ ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ, ಮಹಾ ಮಂತ್ರಾಕ್ಷತೆಯ ಬಳಿಕ ಮಧ್ಯಾಹ್ನ 12.30 ಕ್ಕೆ ಬೈದೇರುಗಳ ದರ್ಶನ ನಡೆಯಿತು.
ಸಂಜೆ ಶ್ರೀ ವೈದ್ಯನಾಥೇಶ್ವರ ಹಾಗೂ ಪರಿವಾರ ದೈವಗಳ ಸನ್ನಿಧಿಯಲ್ಲಿ ಕಲಶ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಉಳ್ಳಾಲ್ತಿ, ಹೊಸಮ್ಮ ಸನ್ನಿಧಿಯಲ್ಲಿ ಕಲಶಪೂಜೆ, ಸಪ್ತಶತೀ ಪಾರಾಯಣ ಸಮಾಪ್ತಿಯಾಯಿತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...