Wednesday, February 12, 2025

ಬಾಕಿಲಗುತ್ತು: ಶತ ಚಂಡಿಕಾ ಯಾಗ, ಕಲಶಾಭಿಷೇಕ

ವಿಟ್ಲ: ಅನಂತಾಡಿ ಬಾಕಿಲಗುತ್ತು ಕ್ಷೇತ್ರದಲ್ಲಿ ಶುಕ್ರವಾರ ಮುಂಜಾನೆ 5.30 ರಿಂದ ಗಣಪತಿ ಹವನ, ಬೆಳಗ್ಗೆ 7 ಗಂಟೆಯಿಂದ ಶತ ಚಂಡಿಕಾ ಯಾಗ ಆರಂಭಗೊಂಡಿತು. 10.45ಕ್ಕೆ ಯಾಗ ಪೂರ್ಣಾಹುತಿ ನಡೆಯಿತು.
ಶ್ರೀ ಕ್ಷೇತ್ರದ ಶ್ರೀ ಉಳ್ಳಾಲ್ತಿ, ಹೊಸಮ್ಮನ ಸನ್ನಿಧಿಯಲ್ಲಿ ಕಲಶಾಭಿಷೇಕ ನಡೆದವು. ಮಧ್ಯಾಹ್ನ ಮಹಾಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು.
ಬೆರ್ಮೆರ್ ಬೈದೇರುಗಳ ಗರಡಿಯಲ್ಲಿ ಮಧ್ಯಾಹ್ನ ಬೈದೇರುಗಳ ದರ್ಶನ, ಧರ್ಮಚಾವಡಿ ಭೇಟಿ, ಬಳಿಕ ಅನ್ನ ಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಬಾಕಿಲಗುತ್ತು ಆಡಳಿತ ಟ್ರಸ್ಟ್, ಬಾಕಿಲಗುತ್ತು ಜೀರ್ಣೋದ್ಧಾರ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಬಾಕಿಲಗುತ್ತು ಕುಟುಂಬಸ್ಥರು, ಊರಪರವೂರ ದೈವಾಭಿಮಾನಿಗಳು ಇದ್ದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...