ಬಂಟ್ವಾಳ: ಬಾಳ್ತಿಲ ಗ್ರಾಮದ ಪೂರ್ಲಿಪಾಡಿಯ ರಾಜೀವ ಸಪಲ್ಯರಿಗೆ ಸ್ವಗೃಹದಲ್ಲಿ ಶಾಸಕರ ಪರವಾಗಿ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ವಿಠಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಂದ ಶಿಫಾರಸುಗೊಂಡು ಮಂಜೂರಾದ, ಮುಖ್ಯಮಂತ್ರಿಗಳ ವೈದ್ಯಕೀಯ ಪರಿಹಾರಧನ ರೂ.49,250 ನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಜಿ.ಪಂ .ಸದಸ್ಯ ಆರ್.ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಬಿಜೆಪಿ ರೈತ ಮೋರ್ಚ ಉಪಾಧ್ಯಕ್ಷ ಬಿ.ಕೆ.ಅಣ್ಣು ಪೂಜಾರಿ, ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಲೋಕಾನಂದ ಏಳ್ತಿಮಾರ್ ಉಪಸ್ಥಿತರಿದ್ದರು.