Wednesday, January 28, 2026

ಬಾಬ್ರಿ ಮಸೀದಿ ಧ್ವಂಸ ಪ್ರಕರಣ : ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ ಸೇರಿ ಎಲ್ಲಾ 32 ಆರೋಪಿಗಳು ದೋಷ ಮುಕ್ತ

ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿರುವ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಆರೋಪಿಗಳು ನಿರ್ದೋಷಿಗಳು ಎಂದು ಮಹತ್ವದ ತೀರ್ಪು ನೀಡಿದೆ.
ಲಕ್ನೋದ ಸಿಬಿಐ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಬಾಬ್ರಿ ಮಸೀದಿ ಧ್ವಂಸ ಘಟನೆ ಪೂರ್ವ ನಿಯೋಜಿತ ಕೃತ್ಯ ಅಲ್ಲ, ಆಕಸ್ಮಿಕವಾಗಿ ನಡೆದಿರುವಂತದ್ದು, ಆರೋಪ ಸಾಬೀತು ಪಡಿಸಲು ಪ್ರಬಲ ಸಾಕ್ಷ್ಯಗಳು ಇಲ್ಲ. ಎಲ್ಲಾ 32 ಆರೋಪಿಗಳು ನಿರ್ದೋಷಿಗಳು ಎಂದು ಆದೇಶ ಪ್ರಕಟಿಸಿದ್ದಾರೆ.
ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ, ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ, ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ನಿರ್ದೋಷಿಗಳು ಎಂದು ಲಕ್ನೋದ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ :
ಮೊಘಲರ ಕಾಲದಲ್ಲಿ ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕಟ್ಟಲಾಗಿತ್ತು. ನಂತರ ಅಲ್ಲಿ ರಾಮ ಮಂದಿರ ಕೆಡವಿ ಬಾಬ್ರಿ ಮಸೀದಿ ನಿರ್ಮಾಣ ಮಾಡಲಾಗಿದೆ ಎಂದು ಹಿಂದುಗಳು ಆರೋಪಿಸಿದ್ದರು. 1984ರಲ್ಲಿ ವಿಶ್ವ ಹಿಂದು ಪರಿಷತ್ ಆಂದೋಲನ ಶುರುಮಾಡಿತು. ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ಕರಸೇವಕರು ಬಾಬ್ರಿ ಮಸೀದಿಯನ್ನು ಕೆಡವಿದರು.
ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್ ಸಿಂಗ್, ಉಮಾ ಭಾರತಿ ಮತ್ತಿತರ 48 ಮಂದಿ ಸೇರಿ ಸಂಚುರೂಪಿಸಿ ಭೂವಿವಾದ ವಿಚಾರಣೆಯ ಹಂತದಲ್ಲಿರುವಾಗಲೇ 1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿಯನ್ನು ಕೆಡವಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...