ಬಂಟ್ವಾಳ: ಬಂಟ್ವಾಳ ತಾಲೂಕು ಬಡಗ ಕಜೆಕಾರು ಗ್ರಾ.ಪಂ.ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸೌಲಭ್ಯ ವಿತರಣೆ ಕಾರ್ಯಕ್ರಮ ಪಾಂಡವರಕಲ್ಲು ಸಮುದಾಯ ಭವನದಲ್ಲಿ ಜರಗಿತು.
ಗ್ರಾ.ಪಂ.ಅಧ್ಯಕ್ಷ ವಜ್ರ ಪೂಜಾರಿ ಬಾರ್ದೊಟ್ಟು ಅವರು ಗ್ಯಾಸ್ ಕಿಟ್ ವಿತರಿಸಿ ಮಾತನಾಡಿ, ಮಹಿಳೆಯರ ಆರೋಗ್ಯದ ಮೇಲೆ ದುಷ್ಪರಿಣಾಮ ಗಳು ಬೀಳದಂತೆ ಪ್ರಧಾನಮಂತ್ರಿಯವರು ವಿಶೇಷ ಕಾಳಜಿಯಿಂದ ಈ ಯೋಜನೆ ಜಾರಿಗೆ ತಂದಿದ್ದಾರೆ . ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಗ್ರಾ.ಪಂ.ಅ.ಅಧಿಕಾರಿ ಬಾಲಕೃಷ್ಣ ಪೂಜಾರಿ, ಪ್ರಮುಖರಾದ ವಾಸು ದೇವಾಡಿಗ, ದಿನೇಶ್ ಜೆಂಕ್ಯಾರು, ಹರೀಶ್ ಪ್ರಭು, ಪ್ರಮೋದ್ ಸಾಲ್ಯಾನ್, ಪ್ರವೀಣ್ ಗೌಡ, ಪ್ರವೀಣ ಪೂಜಾರಿ ಮಾಡ, ಮುತ್ತಪ್ಪ ಮೂಲ್ಯ ಮತ್ತಿತರರು ಉಪಸ್ಥಿತರಿದ್ದರು.
ಕಂಬಳ ಉದ್ಘೋಷಕ ಪ್ರಕಾಶ್ ಕರ್ಲ ಸ್ವಾಗತಿಸಿ , ವಂದಿಸಿದರು.


