Wednesday, February 12, 2025

ಬಡಗಕಜೆಕಾರು ಶಾಲೆಯಲ್ಲಿ ಪ್ರಥಮ ವರ್ಷದ ವಾರ್ಷಿಕೋತ್ಸವ

ಬಂಟ್ವಾಳ: ಬಡಗಕಜೆಕಾರು ಹಳೆ ವಿದ್ಯಾರ್ಥಿ ಸಂಘ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡ ಒಕ್ಕೂಟದ ವತಿಯಿಂದ ಬಡಗಕಜೆಕಾರು ಶಾಲೆಯಲ್ಲಿ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜರಗಿತು.

ಬೆಳಗ್ಗೆ 10 ಗಂಟೆಗೆ ಪುಂಜಾಲಕಟ್ಟೆ ಆರಕ್ಷಕ ಠಾಣಾ ಅಧಿಕಾರಿ ಸೌಮ್ಯ ಅವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿಕೊಟ್ಟರು. ನಂತರ ಶಾಲಾ ಮಕ್ಕಳಿಂದ ಕವಾಯತು ನಡೆಸಲಾಯಿತು.
ಬೆಳಗಿನ ಸಭಾ ಕಾರ್ಯಕ್ರಮದಲ್ಲಿ ಬಡಗಕಜೆಕಾರು ಗ್ರಾಮ ಪಂಚಾಯತ್ ಅಧ್ಯಕ್ಷ ವಜ್ರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಹರಿಶ್ಚಂದ್ರ ಪೂಜಾರಿ, ಬಂಟ್ವಾಳ ಎಪಿಎಂಸಿ ಸದಸ್ಯರು, ಧರ್ಮರಾಜ ಜೈನ್ ಕಿಜಾನಾ ರು, ತುಂಗಪ್ಪ ಬಂಗೇರ , ಗ್ರಾ.ಪಂ. ಸದಸ್ಯರಾದ ಶೋಭಾ, ಪ್ರವೀಣ್ ಗೌಡ, ಒಕ್ಕೂಟ ಅಧ್ಯಕ್ಷ ಮಾಧವ ಪೂಜಾರಿ, ಗೋಪಾಲ ಪೂಜಾರಿ, ಎಸ್.ಕೆ.ಡಿ.ಆರ್‍.ಪಿ. ಮೇಲ್ವಿಚಾರಕರಾದ ಭವಾನಿ, ಮಾಲತಿ ಶೋಭಾ, ವೇಣೂರು ಕುಂಭಶ್ರೀಯ ಸಂಚಾಲಕ ಗಿರೀಶ ಎಚ್., ಪ್ರಾಂಶುಪಾಲ ರಕ್ಷಿತ್ ಕುಲಾಲ್ ರು , ಡೀಕಯ್ಯ ಬಂಗೇರ ಕರ್ಲ, ಉಪಸ್ಥಿತರಿದ್ದರು.
ಹಳೆ ವಿದ್ಯಾರ್ಥಿಗಳಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಉಪಾಧ್ಯಾಯ ಸೀತಾರಾಮ್ ಸ್ವಾಗತಿಸಿ, ಶಿಕ್ಷಕಿ ಗೀತಾ ಪ್ರಶಸ್ತಿ ವಾಚಿಸಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಮಾಡ ವಂದಿಸಿದರು. ದೇವದಾಸ್ ಮತ್ತು ತಾರನಾಥ್ ಕಾರ್ಯಕ್ರಮ ನಿರೂಪಿಸಿದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...