Friday, July 11, 2025

ಪ್ರಜ್ಞಾ ಸಲಹಾ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಮಂಗಳೂರು: ಕೋವಿಡ್ ಸಂಕಷ್ಟ ದ ಸಂದರ್ಭ ಆರ್ಥಿಕವಾಗಿ ಹಿಂದುಳಿದ‌ 900 ಕುಟುಂಬಗಳಿಗೆ ಅಕ್ಕಿ ಸಹಿತ ದಿನಬಳಕೆಯ ವಸ್ತುಗಳ ಕಿಟ್ ವಿತರಿಸಿದ್ದ ಪ್ರಜ್ಞಾ ಸಲಹಾ ಕೇಂದ್ರ, ಶಾಲೆಗಳು ತೆರೆಯುತ್ತಿದ್ದಂತೆಯೇ, 900 ವಿದ್ಯಾರ್ಥಿಗಳಿಗೆ ಸ್ಕೂಲ್‌ಬ್ಯಾಗ್ ವಿತರಿಸುವ ಕಾರ್ಯ‌ನಡೆಸುತ್ತಿದೆ.


ಕಳೆದ ಮೂರೂವರೆ ದಶಕಗಳಿಂದ ಮಂಗಳೂರಿನ ಕಂಕನಾಡಿಯಲ್ಲಿ ಕೇಂದ್ರ ಕಚೇರಿಯನ್ನು ಹೊಂದಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಹಲವು ಸಮಾಜಮುಖಿ ಕಾರ್ಯಕ್ರಮಗಳ ಜೊತೆಯಲ್ಲಿ ವಿಶೇಷವಾಗಿ ಮಕ್ಕಳಹಕ್ಕು, ಕೌಟುಂಬಿಕ ದೌರ್ಜನ್ಯ ಹಾಗೂ ಸಮಾಜದಲ್ಲಿ ನಿರಂತರ ಕಿರುಕುಳಗಳಿಗೆ ತುತ್ತಾಗುತ್ತಿರುವ ಮಹಿಳೆಯರಿಗೆ ಸಾಂತ್ವನದ ಜೊತೆಗೆ, ಸಮಸ್ಯೆಗೆ ಪರಿಹಾರ, ನ್ಯಾಯ ದೊರಕಿಸಿಕೊಡುವ ಕಾರ್ಯವನ್ನು ನಡೆಸುತ್ತಿದೆ. ಸರಕಾರದ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಸಮಾಜಮುಖಿಯಾಗಿ ಮುನ್ನಡೆಯುತ್ತಿದೆ.
ಪ್ರಸ್ತುತ ಸಂಸ್ಥೆಯು ಹೆಣ್ಣುಮಕ್ಕಳ ಹಾಗೂ ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆಯಡಿಯಲ್ಲಿ ಕಿನ್ನಿಗೋಳಿ ವ್ಯಾಪ್ತಿಯನ್ನು ಕೇಂದ್ರವಾಗಿರಿಸಿಕೊಂಡು ಸುಮಾರು ಮೂರು ವರ್ಷಗಳಿಂದ ಆಸುಪಾಸಿನ 12 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರ ಸುರಕ್ಷತೆ ಮತ್ತು ಅಭಿವೃದ್ಧಿಯನ್ನು ಧ್ಯೇಯವಾಗಿರಿಸಿಕೊಂಡು ಅನೇಕ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ.
ಸ್ಥಳೀಯ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಸಂಯೋಜನೆಯೊಂದಿಗೆ ಹತ್ತು ಹಲವು ಜಾಗೃತಿ ಆಧಾರಿತ ಕಾರ್ಯಕ್ರಮಗಳನ್ನು ನಿರ್ವಹಿಸುವುದರೊಂದಿಗೆ,
ಪರಿಸ್ಥಿತಿಯಲ್ಲಿ ಜನರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಬಡಕುಟುಂಬಗಳಿಗೆ ನೆರವಾದ ಪ್ರಜ್ಞಾ ಸಂಸ್ಥೆ ಮಾನವೀಯತೆ ಮೆರೆದಿದೆ.

ಬ್ಯಾಗ್ ವಿತರಣೆಗೆ ಚಾಲನೆ

ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಿದ್ದ ಪ್ರೌಢಶಾಲೆಗಳು ಇದೀಗ ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ಆಯ್ದ ಸರಕಾರಿ ಹಾಗೂ ಅನುದಾನಿತ ಪ್ರೌಡ ಶಾಲೆ ಸೇರಿ ಹನ್ನೊಂದು ಸರ್ಕಾರಿ ಪೌಢಶಾಲೆಗಳನ್ನು ಗುರುತಿಸಿ, 900 ಬ್ಯಾಗ್ ವಿತರಣೆಗೆ ಪ್ರಜ್ಞಾ ಸಂಸ್ಥೆ ಚಾಲನೆ ನೀಡಿದೆ.
ಪ್ರಜ್ಞಾ ಸಂಸ್ಥೆಯ ಸಂಸ್ಥಾಪಕಿ‌ ಪ್ರೊ. ಹಿಲ್ಡಾ ರಾಯಪ್ಪನ್ ಮಾರ್ಗದರ್ಶನದಲ್ಲಿ ಪ್ರಜ್ಞಾ ಸಂಸ್ಥೆಯ ಯೋಜನಾ ಸಂಯೋಜಕ ವಿಲಿಯಂ‌ ಸ್ಯಾಮುವೆಲ್‌ ಹಾಗೂ ಪ್ರಜ್ಞಾ‌ಸಂಸ್ಥೆಯ ಕಾರ್ಯಕರ್ತರು ಬ್ಯಾಗ್ ವಿತರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನೀರ್ಕೆರೆ , ಮುಚ್ಚೂರು, ಬಡಗ ಎಕ್ಕಾರು, ಮುಲ್ಕಿ ಸರ್ಕಾರಿ ಪ್ರೌಢಶಾಲೆ, ನಾರಾಯಣ ಸನಿಲ್ ಸರ್ಕಾರಿ ಪ್ರೌಢಶಾಲೆ, ಸರ್ವೋದಯ ಪ್ರೌಢಶಾಲೆ ಕಲ್ಲಮುಂಡ್ಕೂರು, ಕೆಪಿಎಸ್ ಕೆ ಅನುದಾನಿತ ಪ್ರೌಢಶಾಲೆ ಪಂಜಿನಡ್ಕ, ಶಾಂತರಾಮ ಶೆಟ್ಟಿ ಸರ್ಕಾರಿ ಪ್ರೌಢಶಾಲೆ ಕೆಮ್ರಾಲ್, ಮುಕ್ತಿ ಪ್ತಕಾಶ್ ಪ್ರೌಢಶಾಲೆ ನೀರುಡೆ, ಲಿಟ್ಲ್ ಫ್ಲವರ್ ಪ್ರೌಢಶಾಲೆ ಕಿನ್ನಿಗೋಳಿ, ಪೊಂಪೈ ಪ್ರೌಢಶಾಲೆ ಐಕಳ ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಲಾಗುತ್ತಿದೆ.

More from the blog

ರಾಷ್ಟ್ರ, ಧರ್ಮಕಾರ್ಯದಲ್ಲಿ ನಮ್ಮನ್ನು ನಾವು ಸಮರ್ಪಿಸಿಕೊಳ್ಳುವುದೇ ನಿಜವಾದ ಗುರುದಕ್ಷಿಣೆ – ಮಂಜುಳಾ ಗೌಡ

ಬಂಟ್ವಾಳ : ಪ್ರಸ್ತುತ ಹಿಂದೂ ಧರ್ಮದ ಮೇಲಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಹಿಂದೂಗಳ ಸಂಘಟನೆ ಆವಶ್ಯಕತೆಯಿದೆ. ಆದರೆ ‘ಸಾಧನೆ ಮತ್ತು ಧರ್ಮ' ಇದು ಸಂಘಟನೆಯ ಅಡಿಪಾಯವಾಗಿದ್ದರೆ ಮಾತ್ರ ರಾಷ್ಟ್ರ-ಧರ್ಮ ಕಾರ್ಯದ ಕಟ್ಟಡ ಭದ್ರವಾಗಿರಲು ಸಾಧ್ಯ....

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...