Wednesday, July 9, 2025

IFF ಬೈಶ್, ಜಿಝಾನ್ ಘಟಕದ ವತಿಯಿಂದ ” ಬೈಶ್ ಕ್ರೀಡೋತ್ಸವ”

ಇಂಡಿಯಾ ಫ್ರೆಟರ್ನಿಟಿ ಫೋರಂ (IFF) ಸೌದಿ ಅರೇಬಿಯಾ ಬೈಶ್ ಘಟಕ ಆಯೋಜಿಸಿದ್ದ ‌” ಫ್ರೆಟರ್ನಿಟಿ ಫೆಸ್ಟ್ 2019″ ರ ಪ್ರಯುಕ್ತ ಬೈಶ್ ಕ್ರೀಡೋತ್ಸವ(Baish sports Fest) ವು ಬೈಶ್ ನ ಫೆನ್ಸ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

                                                                             

ಸ್ನೇಹಕ್ಕಾಗಿ ಕ್ರೀಡೆ ಎಂಬ ಧ್ಯೇಯ ವಾಕ್ಯದೊಂದಿಗೆ ಅನಿವಾಸಿ ಭಾರತೀಯರಿಗಾಗಿ ನಡೆದ ಬೈಶ್ ಕ್ರೀಡೋತ್ಸವದಲ್ಲಿ ಕ್ರಿಕೆಟ್, ವಾಲಿಬಾಲ್, ಹಾಗೂ ಹಗ್ಗ ಜಗ್ಗಾಟ ಸ್ಪರ್ಧೆಗಳು ನಡೆಯಿತು. ಕ್ರೀಡೋತ್ಸವದಲ್ಲಿ ನೂರಾರು ಕ್ರೀಡಾಪಟುಗಳನ್ನೊಳಗೊಂಡ ಒಟ್ಟು 10 ತಂಡಗಳು ಭಾಗವಹಿಸಿದ್ದವು.
ಕ್ರೀಡೋತ್ಸವದ ಚಾಂಪಿಯನ್ ಪಟ್ಟವನ್ನು ಫತೇ ಅಲ್ ಜುನೂಬ್ ತಂಡವು ತನ್ನದಾಗಿಸಿಕೊಂಡಿತು. ಕ್ರೀಡೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯುನೈಟೆಡ್ ಟೆಕ್ ಸಂಸ್ಥೆಯ ರಿಯಾಝ್, ಅಬ್ದುಲ್ ಬಶೀರ್ ಕೈಕಂಬ,IFF ಜಿಲ್ಲಾಸಮಿತಿ ಸದಸ್ಯರಾದ ಸಲೀಮ್ ಗುರುವಾಯನಕೆರೆ, ಹಾಗೂ IFF ಬೈಶ್ ಘಟಕದ ಅದ್ಯಕ್ಶರಾದ ರಹಿಮಾನ್ ಪೋರ್ಕೋಡಿ ಉಪಸ್ಥಿತರಿದ್ದರು..

ಕ್ರೀಡೋತ್ಸವು IFF ಅಭಾ/ಜಿಝಾನ್ ವಲಯಾದ್ಯಕ್ಷರಾದ ಇಕ್ಬಾಲ್ ಕೂಳೂರು ಅವರ ಸಮಾರೋಪ ಭಾಷಣದೊಂದಿಗೆ ಕೊನೆಗೊಂಡಿತು.. ಕ್ರೀಡೋತ್ಸವದ ಸಂಚಾಲಕರಾದ ತಂಶೀರ್ ಬಜ್ಪೆಯವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...