Sunday, January 25, 2026

’ಆಧುನಿಕತೆಯ ಮಧ್ಯೆ ಕಲೆಗಳಿಗೆ ಅಪಾಯ’-ಬಾಳೆಕೋಡಿಶ್ರೀ

ವಿಟ್ಲ: ಆಧುನಿಕ ತಂತ್ರಜ್ಞಾನಗಳಿಂದ ಹಲವಾರು ಕಲೆಗಳು ನಶಿಸುವ ಅಂಚಿನಲ್ಲಿದೆ. ಸತ್ಯ ಹಾಗೂ ಮಿತ್ಯದ ನಡುವಿನಲ್ಲಿ ನಡೆಯುವಂತಹದ್ದು ಯಕ್ಷಿಣಿ ವಿದ್ಯೆ. ಕಲಾಗಾರಿಕೆಯ ಪ್ರದರ್ಶನಕ್ಕೆ ಜನರಿರಬೇಕಾದ್ದು ಮುಖ್ಯ ಎಂದು ಬಾಳೆಕೋಡಿ ಶ್ರೀ ಕಾಶೀಕಾಳಾಭೈರವೇಶ್ವರ ಶಿಲಾಂಜನ ಕ್ಷೇತ್ರದ ಡಾ. ಶಶಿಕಾಂತಮಣಿ ಸ್ವಾಮೀಜಿ ಹೇಳಿದರು.
ಅವರು ಚಂದಳಿಕೆ ಭಾರತ ಅಡಿಟೋರಿಯಂನಲ್ಲಿ ಕಲ್ಲಡ್ಕ ಮಾಯಾಲೋಕದ ವತಿಯಿಂದ ನಡೆದ ಸಭಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಆಶೀರ್ವಚನ ನೀಡದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ದಮಯಂತಿ ಮಾತನಾಡಿ ಕಲೆಯನ್ನು ಬೆಳೆಸಿ ಉಳಿಸುವ ಕಾರ್ಯ ಜನರಿಂದ ನಡೆಯಬೇಕು. ಕಲಾವಿದನನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು.
ಚಿಣ್ಣರ ಮನೆ ಆರ್.ಕೆ ಆರ್ಟ್ಸ್‌ನ ಮಕ್ಕಳಿಂದ ನೃತ್ಯ, ಯಕ್ಷಗಾನ ಹಾಡುಗಳ ಹಾಗೂ ಧ್ವನಿಗಳ ಅನುಕರಣೆ, ಜಾದೂ, ಮಿಮಿಕ್ರಿ, ಹಾಸ್ಯ ಕಾರ್ಯಕ್ರಮ ನಡೆಯಿತು.
ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಪಿ. ಜಯರಾಮ್ ರೈ, ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ. ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಪಾರೆಸ್ಟ್ ಗುತ್ತಿಗೆದಾರ ಆರ್. ಆರ್. ಶೆಟ್ಟಿ, ಉಪ್ಪಿನಂಗಡಿ ಸತ್ಯಶಾಂತ ಪ್ರತಿಷ್ಠಾನದ ಅಧ್ಯಕ್ಷೆ ಶಾಂತಾ ಕುಂಟಿನಿ, ವಿಟ್ಲ ಜೆಸಿಐ ಬಾಲಕೃಷ್ಣ ವಿಟ್ಲ, ಭಾರತ ಅಡಿಟೋರಿಯಂ ಮಾಲಕ ಡಿ. ಸಂಜೀವ, ಆರ್ ಕೆ ಆರ್ಟ್ಸ್‌ನ ರಾಜೇಶ್ ವಿಟ್ಲ ಉಪಸ್ಥಿತರಿದ್ದರು.
ಸ್ನೇಹ ಶೆಟ್ಟಿ ಪ್ರಾರ್ಥಿಸಿದರು. ಶ್ಯಾಂ ಜಾದೂಗಾರ್ ಪ್ರಸ್ತಾವನೆಗೈದರು. ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

 

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...