Wednesday, February 12, 2025

ಬಾಂಬಿಲ: ಮಾ.19ರಿಂದ 23ರವರೆಗೆ ಉರೂಸ್ ಮುಬಾರಕ್-ಧಾರ್ಮಿಕ ಉಪನ್ಯಾಸ 

ಬಂಟ್ವಾಳ: ಮುಬಾರಕ್ ಜುಮಾ ಮಸೀದಿ ಬಾಂಬಿಲ ಇದರ ವಠಾರದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಹಝ್ರತ್ ವಲಿಯುಲ್ಲಾಹಿ ಅಶೈಖ್ ಸೈಯದುಲ್ ಬುಖಾರಿ ಅವರ ಉರೂಸ್ ಮುಬಾರಕ್ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ. 19ರಿಂದ 23ರವರೆಗೆ ಬಾಂಬಿಲ ಶಂಸುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.
ಮಾ. ೧೯ರಂದು ಮಜ್ಲಿಸುನ್ನೂರು ಆಧ್ಯಾತ್ಮಿಕ ಸಂಗಮ ನಡೆಯಲಿದ್ದು, ಸೈಯದ್ ಝೈನುಲ್ ಆಬದೀನ್ ಜಿಫ್ರಿ ತಂಙಳ್ ನೇತೃತ್ವ ವಹಿಸುವರು. ಬಾಂಬಿಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹಮೀದ್ ದೊಡ್ಡಮನೆ ಅಧ್ಯಕ್ಷತೆ ವಹಿಸುವರು. ಮಿತ್ತಬೈಲ್ ಕೆ.ಪಿ.ಇರ್ಷಾದ್ ದಾರಿಮಿ ಅಲ್ ಜಝರಿ ಉದ್ಘಾಟಿಸುವರು. ಮಸೀದಿ ಖತೀಬ್ ಅಬ್ದುಲ್ ಬಶೀರ್ ಯಮಾನಿ ಪ್ರಭಾಷಣ ಮಾಡುವರು. 30ರಂದು ಅಶ್ರಫ್ ಫೈಝಿ ಕೊಡಗು, 21ರಂದು ಅಬೂಬಕರ್ ರಿಯಾಝ್ ರಹ್ಮಾನಿ, 22ರಂದು ಕೆ.ವಿ.ಅಬ್ಬಾಸ್ ದಾರಿಮಿ ಅವರು ಮುಖ್ಯಪ್ರಭಾಷಣ ಮಾಡುವರು.
ಮಾ. 23ರಂದು ಸಂಜೆ ಸಮಾರೋಪ ಸಮಾರಂಭ ಹಾಗೂ ಮೌಲೀದ್ ಪಾರಾಯಣ ನಡೆಯಲಿದ್ದು, ಕೇರಳದ ಎನ್.ಪಿ.ಎಂ. ಸೈಯದ್ ಜಲಾಲುದ್ದೀನ್ ತಂಙಳ್ ಏಝ್ ಮಲ ದುಆಃ ಆಶೀರ್ವಚನ ನೀಡುವರು. ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಎಂಜೆಎಂ ಖತೀಬ್ ಅಬ್ದುಲ್ ಕರೀಂ ಫೈಝಿ ಕುಂತೂರು ಮುಖ್ಯ ಪ್ರಭಾಷಣ ಮಾಡುವರು ಎಂದು ಬಾಂಬಿಲ ಮುಬಾರಕ್ ಜುಮಾ ಮಸೀದಿಯ ಪ್ರಕಟನೆ ತಿಳಿಸಿದೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...