Monday, January 26, 2026

ಬಾಂಬಿಲ: ಮಾ.19ರಿಂದ 23ರವರೆಗೆ ಉರೂಸ್ ಮುಬಾರಕ್-ಧಾರ್ಮಿಕ ಉಪನ್ಯಾಸ 

ಬಂಟ್ವಾಳ: ಮುಬಾರಕ್ ಜುಮಾ ಮಸೀದಿ ಬಾಂಬಿಲ ಇದರ ವಠಾರದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಹಝ್ರತ್ ವಲಿಯುಲ್ಲಾಹಿ ಅಶೈಖ್ ಸೈಯದುಲ್ ಬುಖಾರಿ ಅವರ ಉರೂಸ್ ಮುಬಾರಕ್ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ. 19ರಿಂದ 23ರವರೆಗೆ ಬಾಂಬಿಲ ಶಂಸುಲ್ ಉಲಮಾ ವೇದಿಕೆಯಲ್ಲಿ ನಡೆಯಲಿದೆ.
ಮಾ. ೧೯ರಂದು ಮಜ್ಲಿಸುನ್ನೂರು ಆಧ್ಯಾತ್ಮಿಕ ಸಂಗಮ ನಡೆಯಲಿದ್ದು, ಸೈಯದ್ ಝೈನುಲ್ ಆಬದೀನ್ ಜಿಫ್ರಿ ತಂಙಳ್ ನೇತೃತ್ವ ವಹಿಸುವರು. ಬಾಂಬಿಲ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹಮೀದ್ ದೊಡ್ಡಮನೆ ಅಧ್ಯಕ್ಷತೆ ವಹಿಸುವರು. ಮಿತ್ತಬೈಲ್ ಕೆ.ಪಿ.ಇರ್ಷಾದ್ ದಾರಿಮಿ ಅಲ್ ಜಝರಿ ಉದ್ಘಾಟಿಸುವರು. ಮಸೀದಿ ಖತೀಬ್ ಅಬ್ದುಲ್ ಬಶೀರ್ ಯಮಾನಿ ಪ್ರಭಾಷಣ ಮಾಡುವರು. 30ರಂದು ಅಶ್ರಫ್ ಫೈಝಿ ಕೊಡಗು, 21ರಂದು ಅಬೂಬಕರ್ ರಿಯಾಝ್ ರಹ್ಮಾನಿ, 22ರಂದು ಕೆ.ವಿ.ಅಬ್ಬಾಸ್ ದಾರಿಮಿ ಅವರು ಮುಖ್ಯಪ್ರಭಾಷಣ ಮಾಡುವರು.
ಮಾ. 23ರಂದು ಸಂಜೆ ಸಮಾರೋಪ ಸಮಾರಂಭ ಹಾಗೂ ಮೌಲೀದ್ ಪಾರಾಯಣ ನಡೆಯಲಿದ್ದು, ಕೇರಳದ ಎನ್.ಪಿ.ಎಂ. ಸೈಯದ್ ಜಲಾಲುದ್ದೀನ್ ತಂಙಳ್ ಏಝ್ ಮಲ ದುಆಃ ಆಶೀರ್ವಚನ ನೀಡುವರು. ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಎಂಜೆಎಂ ಖತೀಬ್ ಅಬ್ದುಲ್ ಕರೀಂ ಫೈಝಿ ಕುಂತೂರು ಮುಖ್ಯ ಪ್ರಭಾಷಣ ಮಾಡುವರು ಎಂದು ಬಾಂಬಿಲ ಮುಬಾರಕ್ ಜುಮಾ ಮಸೀದಿಯ ಪ್ರಕಟನೆ ತಿಳಿಸಿದೆ.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...