Friday, January 30, 2026

ಸಾಮಾಜಿಕ ಸೇವೆಗೈಯುತ್ತಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸೇವಾಕಾರ್ಯದ ಪ್ರಯುಕ್ತ ಧನ ಸಹಾಯದ ಚೆಕ್ ಹಸ್ತಾಂತರ

ಪುಂಜಾಲಕಟ್ಟೆ : ಸಾಮಾಜಿಕ ಸೇವೆಗೈಯ್ಯುತ್ತಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸೇವಾಕಾರ್ಯದ ಪ್ರಯುಕ್ತ ಕಾಲಿನ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಂಗಳೂರು ತಾಲೂಕು ಬೈಕಂಪಾಡಿ ಮೀನಕಳಿಯ ಉಷಾ ಮತ್ತು ತುಕಾರಾಮ ಸಾಲ್ಯಾನ್ ದಂಪತಿಯ 12 ವರ್ಷದ ಪುತ್ರಿ ಜಾಗೃತಿಯ ಚಿಕಿತ್ಸೆಗೆ ಅಜ್ಜಿಬೆಟ್ಟು ,ಪದವು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ವಿಭಿನ್ನ ವೇಷ ಧರಿಸಿ ಸಂಗ್ರಹಿಸಿದ 28,532 ರೂ. ಧನ ಸಹಾಯದ ಚೆಕ್‌ಅನ್ನು ಪದವು ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಜೀರ್ಣೋದ್ಧಾರ ಸಮಿತಿ ಪ್ರ. ಕಾರ್ಯದರ್ಶಿಯೋಗೀಶ್ ಕಳಸಡ್ಕ, ಟ್ರಸ್ಟ್ ನ ಸದಸ್ಯರು ಉಪಸ್ಥಿತರಿದ್ದರು.

—————————————————
ಸಾಮಾಜಿಕ ಸೇವೆಗೈಯ್ಯುತ್ತಿರುವ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನ ಸೇವಾಕಾರ್ಯದ ಪ್ರಯುಕ್ತ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಜಖಂಗೊಂಡು ಚಿಕಿತ್ಸೆ ಪಡೆಯುತ್ತಿರುವ, ಮೂಡುಬಿದಿರೆ ತಾಲೂಕಿನ ಪಡು ಮಾರ್ನಾಡು ನಡಿಲ್ಲ ನಡುಮನೆಯ ಬಾಲಕೃಷ್ಣ ಶೆಟ್ಟಿ ಮತ್ತು ಕುಸುಮಾವತಿ ದಂಪತಿಯ 12 ವರ್ಷದ ಪುತ್ರಿ ವೈಷ್ಣವಿಯ ಚಿಕಿತ್ಸೆಗೆ ಕಕ್ಯಪದವು ಶ್ರೀ ಕ್ಷೇತ್ರ ಗರೋಡಿ ಮತ್ತು ಶ್ರೀ ಕ್ಷೇತ್ರ ಪೊಳಲಿಯಲ್ಲಿ ವಿಭಿನ್ನ ವೇಷ ಧರಿಸಿ ಸಂಗ್ರಹಿಸಿದ 51,468 ರೂ. ಧನ ಸಹಾಯದ ಚೆಕ್‌ನ್ನು ಹಸ್ತಾಂತರಿಸಲಾಯಿತು. ಕಕ್ಯಪದವು ಗರೋಡಿ ಕ್ಷೇತ್ರದ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ , ಉತ್ಸವ ಸಮಿತಿಯ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ, ಉಳಿ ಸೇವಾ ಸಹಕಾರ ಸಂಘದ ಅಧ್ಯಕ್ಷ ಎ.ಚೆನ್ನಪ್ಪ ಸಾಲ್ಯಾನ್, ಶ್ರೀ ಪಂಚದುರ್ಗಾ ಜನರಲ್ ಸ್ಟೋರ್‌ನ ಮಾಲಕ ಚಂದ್ರ ಕಕ್ಯಪದವು ಮತ್ತು ಉತ್ಸವ ಸಮಿತಿಯ ಉಪಾಧ್ಯಕ್ಷ ಪರಮೇಶ್ವರ ಗಿಳಿಂಗಾಜೆ ಹಾಗೂ ಟ್ರಸ್ಟ್ ನ ಸದಸ್ಯರು ಉಪಸ್ಥಿತರಿದ್ದರು.

More from the blog

ಕಟೀಲು 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.30ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.30ರ ಸೇವೆಯಾಟಗಳ ವಿವರ : ವಾಸು ಶೆಟ್ಟಿ, 'ಶ್ರೀದೇವಿ ಕೃಪಾ, 7ನೇ...

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆ ಪ್ರಯುಕ್ತ ಗೊನೆ ಮುಹೂರ್ತ

ಬಂಟ್ವಾಳ : ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಫೆ.5 ಗುರುವಾರ ರಾತ್ರಿ ಭಂಡಾರಯೇರಿ, ಮರುದಿನ ಫೆ.6 ಶುಕ್ರವಾರ ಬೆಳಿಗ್ಗೆ ಗಂಟೆ 10ರಿಂದ ಜರುಗಲಿದೆ. ಆ ಪ್ರಯುಕ್ತ ಗೊನೆಮುಹೂರ್ತವು ಗ್ರಾಮದ...

ಕರಾವಳಿ ಜಿಲ್ಲೆಗಳ ಬೆಳೆ ವಿಮೆ ಬಾಕಿ ಮೊತ್ತ ಬಿಡುಗಡೆ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸಾವಿರಾರು ರೈತರಿಗೆ ಬೆಳೆ ವಿಮೆಯ ದೊಡ್ಡ ಮೊತ್ತ ಇನ್ನೂ ಪಾವತಿಯಾಗದೆ ಬಾಕಿ ಇರುವುದು ಸಾಬೀತಾಗಿದೆ. ರಾಜ್ಯಾದ್ಯಂತ ಕೃಷಿಕರು ಸಂಕಷ್ಟದಲ್ಲಿದ್ದರೂ ಸಹ, ವಿಮಾ ಕಂಪನಿಗಳು ಮತ್ತು...

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ : ಷರತ್ತುಗಳೇನು?

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರಿಗೆ ಋತುಚಕ್ರ ರಜೆ ನೀಡಲು ಶಾಲಾ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರಿಗೆ ಕೆಲವೊಂದು ಷರತ್ತುಗಳನ್ನು ಸಹ ವಿಧಿಸಲಾಗಿದೆ. ...