ಬಂಟ್ವಾಳ : ಕೇರಳದಿಂದ ಮಂಗಳೂರು ಪ್ರವೇಶಿಸುವ ತಲಪಾಡಿ, ಸಾರಡ್ಕ, ಮೇಣಾಲ ಮತ್ತು ಜಾಲ್ಸೂರು ಹೊರತು ಪಡಿಸಿ ಉಳಿದೆಲ್ಲಾ ಗಡಿಗಳು ಬಂದ್ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.



ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣ ಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತವು ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ -19ಪಾಸಿಟಿವ್ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುತ್ತದೆ.
ಆದರೆ ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಗಳು ದಿನದಿಂದ ದಿನಕ್ಕೆ ಹೆಚ್ಚಾಗಿರುವುದರಿಂದ ಈ ಆದೇಶ ಹೊರಡಿಸಿದ್ದಾರೆ.












