ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ್ನು ಫೆಬ್ರವರಿ 9 ರಂದು ಒಂದು ದಿನಗಳ ಕಾಲ ಮುಚ್ಚಲಾಗುತ್ತಿದೆ. ಜಿ 20 ರಾಷ್ಟ್ರಗಳ ಪ್ರತಿನಿಧಿಗಳು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಒಂದು ದಿನ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.


ಬೆಂಗಳೂರಿನಲ್ಲಿ ಫೆಬ್ರವರಿ 9 ರಿಂದ 11 ದಿನಗಳ ಕಾಲ ಸಭೆ ನಡೆಯಲಿದೆ. ಸಭೆಯ ಭಾಗವಾಗಿ ಜಿ 20 ಸದಸ್ಯರು ಬೆಂಗಳೂರಿನ ವಿವಿಧ ಭಾಗಗಳಿಗೆ ಭೇಟಿ ನೀಡಲಿದ್ದಾರೆ. ಪ್ರೋಟೋಕಾಲ್ ಪ್ರಕಾರ ಬಿಬಿಪಿ, ಬಟರ್ಫ್ಲೈ ಪಾರ್ಕ್ ಹಾಗೂ ಸಫಾರಿ ಪ್ರದೇಶವನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ. ಭಾರತ ಇಂಧನ ಸಪ್ತಾಹ, ಜಿ 20 ಸಭೆ ಹಾಗೂ ಏರ್ ಶೋ ಪರಿಣಾಮ ಹೊರ ರಾಜ್ಯ ಹಾಗೂ ವಿದೇಶದ ಪ್ರತಿನಿಧಿಗಳ ವಾಸ್ತವ್ಯಕ್ಕೆ ನಗರದ ಹೋಟೆಲ್ಗಳಲ್ಲಿನ ಅಂದಾಜು 50 ಸಾವಿರ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ.












