Friday, July 11, 2025

ಶಿಕ್ಷಣ, ಸಂಸ್ಕೃತಿ, ಹೃದಯ ಶ್ರೀಮಂತಿಕೆಯಲ್ಲಿ ಜೈನರನ್ನು ಮೀರಿಸುವವರಿಲ್ಲ: ಎಂ.ಕೆ.ವಿಜಯಕುಮಾರ್

ಬಂಟ್ವಾಳ : ಶಿಕ್ಷಣ, ಸಂಸ್ಕೃತಿ , ಹೃದಯ ಶ್ರೀಮಂತಿಕೆಯಲ್ಲಿ ಜೈನರನ್ನು ಮೀರಿಸುವವರಿಲ್ಲ, ಇದುವೇ ನಮ್ಮ ಸಮುದಾಯದ ಮುನ್ನಡೆಗೆ ಪ್ರೇರಣೆಯಾಗಬೇಕಿದೆ ಎಂದು ಕಾರ್ಕಳದ ವಕೀಲರಾದ ಎಂ.ಕೆ.ವಿಜಯ ಕುಮಾರ್ ಹೇಳಿದರು.

ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಭಾನುವಾರ ನಡೆದ ಬಂಟ್ವಾಳ ಜೈನ್ ಮಿಲನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಜೈನ ಸಮಾಜ ನಶಿಸಿ ಹೋಗುತ್ತಿದೆ ಎಂಬ ಮಾತುಗಳು ಕೇಳುತ್ತಿದೆ, ಇದು ಸುಳ್ಳು, ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಜೈನಸಮುದಾಯದ ಸಂಖ್ಯೆ ಹೆಚ್ಚಾಗುತ್ತಿದೆ, ಜೈನ್ ಮಿಲನ್ ಮೂಲಕ ನಮ್ಮ ಶಕ್ತಿಯನ್ನು ನಾವು ಅರಿತುಕೊಂಡು ಕ್ರಿಯಾಶೀಲರಾಗಿ ಮುನ್ನಡೆಯುವ ಎಂದವರು ಹೇಳಿದರು.

ಭಾರತೀಯ ಜೈನ್ ಮಿಲನ್ ನ ವಲಯ 8ರ ಉಪಾಧ್ಯಕ್ಷ ಸುದರ್ಶನ್ ಜೈನ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಮಾತನಾಡಿ, ಜೈನಸಮುದಾಯದ ಜನಸಂಖ್ಯೆ ಕಡಿಮೆಯಾಗಿದ್ದರೂ, ನಿರ್ದಿಷ್ಟ ಕಾರ್ಯಕ್ರಮಗಳ ಮೂಲಕ ಸಮುದಾಯಕ್ಕೆ ಮತ್ತಷ್ಟು ಹುರುಪು ತುಂಬುವ ಕಾರ್ಯ ಜೈನ್ ಮಿಲನ್ ನ ಚಟುವಟಿಕೆಗಳ ಮೂಲಕ ಆಗಬೇಕಿದೆ ಎಂದರು.

ಬಂಟ್ವಾಳ ಜೈನ್ ಮಿಲನ್ ನ ನೂತನ ಅಧ್ಯಕ್ಷ ಡಾ.ಸುದೀಪ್ ಕುಮಾರ್ ನೂತನ ಕಾರ್ಯದರ್ಶಿ ಸನ್ಮತಿ ಜಯಕೀರ್ತಿ ಜೈನ್, ನೂತನ ಕೋಶಾಧಿಕಾರಿ ಅಜಿತ್ ಕುಮಾರ್ ಜೈನ್ ಮತ್ತು ಬಳಗ ಅಧಿಕಾರ ವಹಿಸಿಕೊಂಡಿತು.
ಮಂಗಳೂರು ವಿಭಾಗದ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಧನ್ಯಕುಮಾರ್ ರೈ, ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷ ವೀರ್ ಬ್ರಿಜೇಶ್ ಜೈನ್, ಕಾರ್ಯದರ್ಶಿ ಗೀತಾ ಜಿನಚಂದ್ರ, ವೇದಿಕೆಯಲ್ಲಿದ್ದರು.
ಜೈನ್ ಮಿಲನ್ ನ ವಿವಿಧ ವಿಭಾಗಗಳ ನಿರ್ದೇಶಕರಾದ ರಾಜವರ್ಮ ಆರಿಗ, ಮಹಾವೀರ ಅಂಡಾರು, ಧೀರಜ್ ಕುಮಾರ್, ಪ್ರಮೋದ್ ಕುಮಾರ್ ರವರನ್ನು ಬಂಟ್ವಾಳ ಜೈನ್ ಮಿಲನ್ ವತಿಯಿಂದ ಗೌರವಿಸಲಾಯಿತು.
ವಂದನಾ ಆರ್ ಚೌಟ ಸ್ಬಾಗತಿಸಿದರು. ನೂತನ ಕಾರ್ಯದರ್ಶಿ ಸನ್ಮತಿ ಜಯಕೀರ್ತಿ ವಂದಿಸಿದರು. ಭರತ್ ಕುಮಾರ್ ಸಿದ್ಧಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

More from the blog

ಬಂಟ್ವಾಳ ತಾಲೂಕು ತುಳುವ ಮಹಾಸಭೆಯ ಸಂಚಾಲಕರಾಗಿ ಉಮೇಶ್ ಗೌಡ ಮಾಡತ್ತೇಲು ಆಯ್ಕೆ

ಬಂಟ್ವಾಳ : ತುಳುನಾಡಿನ ಅಸ್ಮಿತೆಯ ಚಳುವಳಿಯಾಗಿ ಗುರುತಿಸಲ್ಪಟ್ಟ ತುಳುವ ಮಹಾಸಭೆ ತನ್ನ ಶತಮಾನೋತ್ಸವದ ಸಂಧರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿದೆ. ಇಂತಹ ನಿರ್ಣಾಯಕ ಸಮಯದಲ್ಲಿ, ಬಂಟ್ವಾಳ ತಾಲೂಕು ಘಟಕದ ಸಂಚಾಲಕರಾಗಿ ಸಮಾಜ ಶಾಸ್ತ್ರದಲ್ಲಿ...

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ : ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ..

ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ...

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಭೆ.. 

ಬಂಟ್ವಾಳ : ಜೀವನದಲ್ಲಿ ತಾಯಿಯ ಪಾತ್ರ ಬಹಳ ದೊಡ್ಡದು. ಮಗುವಿನ ನೋವು ನಲಿವಿನಲ್ಲಿ ಮಾತ್ರವಲ್ಲದೆ ಸಂಸ್ಕಾರಯುತ ಶಿಕ್ಷಣ ಹೊಂದುವಲ್ಲೂ ತಾಯಿ ಮಗುವಿನ ಪ್ರತಿ ಹಂತದಲ್ಲೂ ಜೊತೆಯಾಗಿರಬೇಕು, ಸಂಸ್ಕಾರಯುತ ಶಿಕ್ಷಣವು ಮನೆಯಿಂದಲೇ ಪ್ರಾರಂಭವಾಗುವಲ್ಲಿ ತಾಯಿಯೇ...

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಪಹರಣ ಮತ್ತು ವಂಚನೆ ಪ್ರಕರಣದ ಆರೋಪಿಯೋರ್ವ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದ ತಲೆಮರೆಸಿಕೊಂಡಿದ್ದಾತನನ್ನು‌ ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ‌ನಡೆದಿದೆ. ಬಂಟ್ವಾಳ...