Tuesday, January 27, 2026

ಶಿಕ್ಷಣ, ಸಂಸ್ಕೃತಿ, ಹೃದಯ ಶ್ರೀಮಂತಿಕೆಯಲ್ಲಿ ಜೈನರನ್ನು ಮೀರಿಸುವವರಿಲ್ಲ: ಎಂ.ಕೆ.ವಿಜಯಕುಮಾರ್

ಬಂಟ್ವಾಳ : ಶಿಕ್ಷಣ, ಸಂಸ್ಕೃತಿ , ಹೃದಯ ಶ್ರೀಮಂತಿಕೆಯಲ್ಲಿ ಜೈನರನ್ನು ಮೀರಿಸುವವರಿಲ್ಲ, ಇದುವೇ ನಮ್ಮ ಸಮುದಾಯದ ಮುನ್ನಡೆಗೆ ಪ್ರೇರಣೆಯಾಗಬೇಕಿದೆ ಎಂದು ಕಾರ್ಕಳದ ವಕೀಲರಾದ ಎಂ.ಕೆ.ವಿಜಯ ಕುಮಾರ್ ಹೇಳಿದರು.

ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ಭಾನುವಾರ ನಡೆದ ಬಂಟ್ವಾಳ ಜೈನ್ ಮಿಲನ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಜೈನ ಸಮಾಜ ನಶಿಸಿ ಹೋಗುತ್ತಿದೆ ಎಂಬ ಮಾತುಗಳು ಕೇಳುತ್ತಿದೆ, ಇದು ಸುಳ್ಳು, ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಜೈನಸಮುದಾಯದ ಸಂಖ್ಯೆ ಹೆಚ್ಚಾಗುತ್ತಿದೆ, ಜೈನ್ ಮಿಲನ್ ಮೂಲಕ ನಮ್ಮ ಶಕ್ತಿಯನ್ನು ನಾವು ಅರಿತುಕೊಂಡು ಕ್ರಿಯಾಶೀಲರಾಗಿ ಮುನ್ನಡೆಯುವ ಎಂದವರು ಹೇಳಿದರು.

ಭಾರತೀಯ ಜೈನ್ ಮಿಲನ್ ನ ವಲಯ 8ರ ಉಪಾಧ್ಯಕ್ಷ ಸುದರ್ಶನ್ ಜೈನ್ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಬಳಿಕ ಮಾತನಾಡಿ, ಜೈನಸಮುದಾಯದ ಜನಸಂಖ್ಯೆ ಕಡಿಮೆಯಾಗಿದ್ದರೂ, ನಿರ್ದಿಷ್ಟ ಕಾರ್ಯಕ್ರಮಗಳ ಮೂಲಕ ಸಮುದಾಯಕ್ಕೆ ಮತ್ತಷ್ಟು ಹುರುಪು ತುಂಬುವ ಕಾರ್ಯ ಜೈನ್ ಮಿಲನ್ ನ ಚಟುವಟಿಕೆಗಳ ಮೂಲಕ ಆಗಬೇಕಿದೆ ಎಂದರು.

ಬಂಟ್ವಾಳ ಜೈನ್ ಮಿಲನ್ ನ ನೂತನ ಅಧ್ಯಕ್ಷ ಡಾ.ಸುದೀಪ್ ಕುಮಾರ್ ನೂತನ ಕಾರ್ಯದರ್ಶಿ ಸನ್ಮತಿ ಜಯಕೀರ್ತಿ ಜೈನ್, ನೂತನ ಕೋಶಾಧಿಕಾರಿ ಅಜಿತ್ ಕುಮಾರ್ ಜೈನ್ ಮತ್ತು ಬಳಗ ಅಧಿಕಾರ ವಹಿಸಿಕೊಂಡಿತು.
ಮಂಗಳೂರು ವಿಭಾಗದ ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಧನ್ಯಕುಮಾರ್ ರೈ, ಬಂಟ್ವಾಳ ಜೈನ್ ಮಿಲನ್ ಅಧ್ಯಕ್ಷ ವೀರ್ ಬ್ರಿಜೇಶ್ ಜೈನ್, ಕಾರ್ಯದರ್ಶಿ ಗೀತಾ ಜಿನಚಂದ್ರ, ವೇದಿಕೆಯಲ್ಲಿದ್ದರು.
ಜೈನ್ ಮಿಲನ್ ನ ವಿವಿಧ ವಿಭಾಗಗಳ ನಿರ್ದೇಶಕರಾದ ರಾಜವರ್ಮ ಆರಿಗ, ಮಹಾವೀರ ಅಂಡಾರು, ಧೀರಜ್ ಕುಮಾರ್, ಪ್ರಮೋದ್ ಕುಮಾರ್ ರವರನ್ನು ಬಂಟ್ವಾಳ ಜೈನ್ ಮಿಲನ್ ವತಿಯಿಂದ ಗೌರವಿಸಲಾಯಿತು.
ವಂದನಾ ಆರ್ ಚೌಟ ಸ್ಬಾಗತಿಸಿದರು. ನೂತನ ಕಾರ್ಯದರ್ಶಿ ಸನ್ಮತಿ ಜಯಕೀರ್ತಿ ವಂದಿಸಿದರು. ಭರತ್ ಕುಮಾರ್ ಸಿದ್ಧಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...