Saturday, January 31, 2026

ಬರಿದಾಗುತ್ತಿದೆ ಕಾರಿಂಜೇಶ್ವರನ ಒಡಲು: ಮೊಗರೋಡಿ ಸಂಸ್ಥೆಯವರು ತೀರ್ಥ ಸ್ನಾನದ ಕೆರೆಯ ನೀರು ದುರ್ಬಳಕೆ

ಬಂಟ್ವಾಳ: ಎಪ್ರಿಲ್, ಮೇ ತಿಂಗಳು ನೀರು ಕಡಿಮೆಯಾಗುವಂತಹ ಸಮಯ. ಎಲ್ಲಾ ಕಡೆಗಳಲ್ಲಿ ಯೂ ಕುಡಿಯುವ ನೀರಿಗಾಗಿ ಹಾಹಾಕಾರಗಳು ಕೇಳಿ ಬರುವ ಸಮಯ.
ಈ ಬಾರಿಯೂ ದ.ಕ.ಜಿಲ್ಲೆಯ ಹಲವು ಕಡೆಗಳಲ್ಲಿ ಕುಡಿಯುವ ನೀರಿಗಾಗಿ ಕೂಗು ಕೇಳಿ ಬಂದಿದೆ. ಕುಡಿಯಲು ನೀರಿಲ್ಲದ ಇಂತಹ ಸಮಯದಲ್ಲಿ ಕಂಪೆನಿಯೊಂದು ಕಾರಿಂಜೇಶ್ವರನ ತೀರ್ಥ ಸ್ನಾನದ ಕೆರೆಯಿಂದ ನೀರನ್ನು ರಸ್ತೆಯ ಕಾಮಾಗಾರಿಗೆ ಬಳಸುತ್ತಿದ್ದು ಸಾರ್ವಜನಿಕ ವಲಯದಲ್ಲಿ ಬಾರೀ ಆಕ್ರೋಶ ವ್ಯಕ್ತವಾಗಿದೆ.

ಬಂಟ್ವಾಳ ದಿಂದ ಪುಂಜಾಲಕಟ್ಟೆ ಯವರೆಗೆ ನಡೆಯುವ ಚತುಷ್ಪತ ಕಾಮಗಾರಿಗೆ ಈ ನೀರನ್ನು ಬಳಸಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.
ಕಾವಳಮೂಡೂರು ಗ್ರಾಮ‌ಪಂಚಾಯತ್ ವ್ಯಾಪ್ತಿಯಲ್ಲಿರುವ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ವಗ್ಗ ಕಾರಿಂಜೇಶ್ವರ ದೇವಸ್ಥಾನದ ಗದಾ ತೀರ್ಥದ ಒಡಲು ಖಾಲಿಯಾಗುತಿದೆ ಆದರೂ ಸ್ಥಳೀಯ ನಾಯಕರೆಲ್ಲ ಮೌನರಾಗಿದ್ದರೆ .

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಸುತ್ತಿರುವ ಸುದಾಕರ ಶೆಟ್ಟಿ ಅವರ ಮೊಗರೋಡಿ ಖಾಸಗಿ ಸಂಸ್ಥೆ ಯು ನೀರನ್ನು ಅಕ್ರಮವಾಗಿ ದಿನಕ್ಕೆ 100 ಟ್ಯಾಂಕರಿಗಿಂತಲೂ ಅಧಿಕವಾಗಿ ತೆಗೆಯುತ್ತಿದ್ದು ಗದಾ ತೀರ್ಥದ ಕೆರೆಯು ಬರಿದಾಗಬಹುದು ಇದರಿಂದ ಕ್ಷೇತ್ರದ ಪಾವಿತ್ರ್ಯತೆಗೆ ದಕ್ಕೆ ಬರಬಹುದು ಕ್ಷೇತ್ರದ ಸಮಿತಿಯು ಮತ್ತು ಅಲ್ಲಿನ ಸರಕಾರಿ ಅಧಿಕಾರಿಗಳು ಮೌನರಾಗಿರುವುದು ಸಂಶಯಾಸ್ಪದಕವಾಗಿದೆ .

ನಾಲ್ಕು ಕಡೆಗಳಲ್ಲಿ ಕೆರೆಗೆ ಪೈಪ್ ಗಳನ್ನು ಅಳವಡಿಸಿದ್ದು ನಾಲ್ಕು ಟ್ಯಾಂಕ್ ರುಗಳ ಮೂಲಕ ದಿನಪೂರ್ತಿ ಇಲ್ಲಿಂದ ನೀರನ್ನು ಪಂಪ್ ಮಾಡಿ ಕೊಂಡುಹೋಗಲಾಗುತ್ತಿದೆ.
ಮಳೆ ಇರಲಿ ಬೇಸಿಗೆ ಇರಲಿ ಈ ಕೆರೆಯ ನೀರು ಸಿಹಿ ಯಾಗಿರುತ್ತದೆ. ಸಾಕಷ್ಟು ಹಿನ್ನಲೆ ಇರುವ ಈ ತೀರ್ಥ ಸ್ನಾನ ದ ಕೆರೆಯ ನೀರನ್ನು ಅಕ್ರಮವಾಗಿ ಖಾಸಗಿ ಸಂಸ್ಥೆ ಬಳಸುತ್ತಿರುವುದಕ್ಕೆ ವ್ಯಾಪಕ ಅಕ್ರೋಶ ವ್ಯಕ್ತವಾಗಿದ್ದಲ್ಲದೆ ಜಿಲ್ಲಾಧಿಕಾರಿ ಅವರು ಸೂಕ್ತ ಕ್ರಮಕೈಗೊಳ್ಳಲು ವಿನಂತಿ ಸಿದ್ದಾರೆ. ದಯವಿಟ್ಟು ಶಾಸಕರು ಈ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿ ವಿನಂತಿಯನ್ನು ಸ್ಥಳೀಯರು ಮಾಡಿದ್ದಾರೆ.

More from the blog

ಫೆ.3 ಮತ್ತು 17ರಂದು ಪಣೋಲಿಬೈಲು ಕ್ಷೇತ್ರದಲ್ಲಿ ಅಗೇಲು ಸೇವೆ ಇಲ್ಲ 

ಬಂಟ್ವಾಳ : ತಾಲೂಕಿನ ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ತಾ03 ಮತ್ತು17ರಂದು ಅಗೆಲು ಸೇವೆ ಇರುವುದಿಲ್ಲ ಉಳಿದ ಆದಿತ್ಯವಾರ ಮಂಗಳವಾರ ಶುಕ್ರವಾರ ಅಗೇಲು ಸೇವೆ...

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...