Wednesday, February 12, 2025

ರಸ್ತೆ ಅಗಲೀಕರಣ ದೂರು ಅರ್ಜಿಗಳ ಪರಿಶೀಲನೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ 73 ರ ಬಿ.ಸಿ.ರೋಡಿನಿಂದ ಕೊಟ್ಟಿಗೆಹಾರ 19.800 ನಿಂದ 75.709 ವರೆಗೆ ರಸ್ತೆಯನ್ನು 2 ಲೇನ್ ಗಾಗಿ ಅಗಲಗೊಳಿಸುವ ಉದ್ದೇಶದಿಂದ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡಿದೆ.
ಈ‌ ಹಿನ್ನಲೆಯಲ್ಲಿ ಭೂಮಿ ಮಾಲೀಕರು ರಸ್ತೆ ಅಗಲೀಕರಣಕ್ಕೆ ತಕರಾರುಗಳಿವೆ ಎಂದು ನೀಡಿದ ದೂರು ಅರ್ಜಿಗಳ ಬಗ್ಗೆ ಪರಿಶೀಲನೆ ಕಾರ್ಯ ಬುಧವಾರ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ನಡೆಯಿತು.


ರಸ್ತೆ ಅಗಲೀಕರಣದ ಬಗ್ಗೆ ದಿನ ಪತ್ರಿಕೆಯಲ್ಲಿ ವಿವರಗಳನ್ನು ಪ್ರಕಟಗೊಂಡ ಬಳಿಕ ಸಂಬಂಧಿಸಿದ ಜಮೀನು ಮಾಲಕರು ತಕರಾರು ಮಾಡಿದ್ದರಿಂದ ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಬೆಂಗಳೂರು ವಿಶೇಷ ಭೂಸ್ವಾಧೀನಧಿಕಾರಿಗಳ ಅಧಿಕಾರಿಗಳು ದೂರು ಅರ್ಜಿಗಳ ಪರಿಶೀಲನೆ ನಡೆಸಿ ಅವರಿಗೆ ಸೂಕ್ತವಾದ ಮಾಹಿತಿ ನೀಡಲಾಯಿತು. ಇನ್ನು ನೀಡದೆ ಇರುವ ತಕರಾರು ದೂರು ಅರ್ಜಿಯನ್ನು ಸ್ಥಳದಲ್ಲಿ ಪಡೆದುಕೊಂಡು ಅವರಿಗೆ ಬೇಕಾದ ಎಲ್ಲಾ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂಧರ್ಭದಲ್ಲಿ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಮನವಿ ನೀಡಿದರು.
ಸುಮಾರು 36 ಜನರ ವರ್ಗ ಸ್ಥಳವು ರಸ್ತೆಗೆ ತಾಗಿಕೊಂಡಿದೆ, ಈ ಜಮೀನಿನ ಬಗ್ಗೆ ಸರಿಯಾದ ವೈಜ್ಞಾನಿಕ ರೀತಿಯಲ್ಲಿ ಸರ್ವೆ ಕಾರ್ಯ ನಡೆಸಿ ಫಲಾನುಭವಿಗಳಿಗೆ ನ್ಯಾಯೋಚಿತ ಪರಿಹಾರ ನೀಡುವಂತೆ ತಿಳಿಸಿದ್ದಾರೆ.
ಸಂದರ್ಭದಲ್ಲಿ ಮ್ಯಾನೇಜರ್ ಮಂಜುನಾಥ್, ಸರ್ವೆ ಯರ್ ಕೃಷ್ಣಸ್ವಾಮಿ ಸಿಬ್ಬಂದಿಗಳಾದ ಹನುಮೇಗೌಡ, ರಾಮನಾಥ್ ಹಾಜರಿದ್ದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...