Wednesday, July 9, 2025

ಅಕ್ರಮ ಪಡಿತರ ಅಕ್ಕಿ ದಾಸ್ತಾನು,ಸಾಗಾಟಕ್ಕೆ ಯತ್ನ: ಇಬ್ಬರ ಬಂಧನ

ಬಂಟ್ವಾಳ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮತ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬುಧವಾರ ಬಂಧಿಸಿ, ಸುಮಾರು 150 ಮೂಟೆಗಳಲ್ಲಿ ತುಂಬಿಸಿಡಲಾದ ಒಟ್ಟು 5470 ಕೆ.ಜಿ. (54 ಕ್ವಿಂಟಲ್ ) ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

                

ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಎಎಸ್ಪಿ ಸೈದುಲ್ ಅಡಾವತ್ ನೇತೃತ್ವದ ಪೊಲೀಸ್ ತಂಡ ದಾಳಿ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭ ಗೂಡಿನಬಳಿ ಎಂಬಲ್ಲಿ ದಾಸ್ತಾನಿರಿಸಲಾಗಿರುವ ಮತ್ತು ಸಾಗಾಟಕ್ಕೆ ಪಿಕ್ ಅಪ್ ನಲ್ಲಿ ತುಂಬಿಸಲಾದ ಅಕ್ಕಿ ಮೂಟೆಗಳು ಕಂಡುಬಂದಿದ್ದು, ಈ ಸಂಬಂಧ  ಅಬ್ದುಲ್ ಹಕೀಂ ಮತ್ತು ಅಬ್ದುಲ್ ಸಲಾಂ ಎಂಬವರನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದಾಗ  ಜನರಿಂದ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದುಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು   ಕೇರಳಕ್ಕೆ ಸಾಗಾಟಮಾಡುತ್ತಿರುವುದು  ಬೆಳಕಿಗೆ ಬಂದಿದೆ.  ತಕ್ಷಣ ಆರೋಪಿಗಳನ್ನು ಬಂಧಿಸಿ ವಾಹನದಲ್ಲಿದ್ದ 50 ಕೆ.ಜಿ. ತೂಕದ 60 ಚೀಲಗಳು, ಅಂಗಡಿಯಲ್ಲಿದ್ದ ತಲಾ 50 ಕೆ.ಜಿ. ತೂಕದ 27 ಬ್ಯಾಗುಗಳು, 40 ಕೆ.ಜಿ. ತೂಕದ 28 ಚೀಲಗಳ ಅಕ್ಕಿಯನ್ನು ತೂಗುಯಂತ್ರ, 2 ಹೊಲಿಗೆ ಯಂತ್ರ, ಪಿಕಪ್ ವಾಹನವನ್ನು ಸ್ವಾಧೀನಪಡಿಸಿಕೊಂಡು ಮುಂದಿನ ತನಿಖೆಗೆ ನಗರ ಪೊಲೀಸರಿಗೆ ಒಪ್ಪಿಸಿದರು‌.

ಈ ಕುರಿತು ಬಂಟ್ವಾಳ ತಾಲೂಕು ಆಹಾರ ನಿರೀಕ್ಷಕರು ನೀಡಿದ ದೂರಿನನ್ವಯ ಬಂಟ್ವಾಳ ನಗರ ಠಾಣೆಯಲ್ಲಿ ಕಲಂ 3, ಕರ್ನಾಟಕ ಅವಶ್ಯಕ ವಸ್ತುಗಳ ಕಾಯ್ದೆ 1955, ಹಾಗೂ 4, 5 ಕರ್ನಾಟಕಅಗತ್ಯ ವಸ್ತುಗಳ ದರ ಮತ್ತು ದಾಸ್ತನು ನಿರ್ವಹಣಾ ಆದೇಶ 1981 ನಿಯಮ ಮತ್ತು 18 ಕರ್ನಾಟಕ ಅವಶ್ಯಕ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ ನಿಯಂತ್ರಣ ಆದೇಶ 2016ರಂತೆ ನಿಯಮ ಉಲಂಘನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...