Thursday, February 13, 2025

ವಿಚಾರ ಸಂಕೀರ್ಣ

ಬಂಟ್ವಾಳ:  ದ.ಕ ಜಿಲ್ಲೆಯಲ್ಲಿ ತೀವ್ರವಾಗಿ ಅಂತರ್ಜಲ ಮಟ್ಟ ಕುಸಿಯಲು ಭತ್ತದ ಬೇಸಾಯ ಅವನತಿಯತ್ತ ಸಾಗುತ್ತಿರುವುದೇ ಕಾರಣವಾಗಿದೆ. ಭತ್ತದ ಕೃಷಿಯ ಈಗಿನ ಸ್ಥಿತಿಗೆ ಸರಕಾರದ ತಪ್ಪು ನಿರ್ಧಾರಗಳೇ ಕಾರಣವಾಗುತ್ತಿದೆ. ಹೊಟ್ಟೆಗೆ ಅನ್ನ ನೀಡುವ ಭತ್ತದ ಕೃಷಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗವನ್ನು ಸೃಷ್ಟಿಸುವ ಕಾಯಕವಾಗಿದೆ.ಆದ್ದರಿಂದ ಭತ್ತದ ಕೃಷಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ಮಾಡಿಕೊಡಬೇಕು ಎಂದು ಬೆಳ್ತಂಗಡಿ ಮಿತ್ತಬಾಗಿಲು ಸಾವಯವ ಭತ್ತದ ಕೃಷಿಯ ಹಾಗೂ ಭತ್ತದ ತಳಿ ಸಂರಕ್ಷಕರಾದ ಬಿ.ಕೆ.ಪರಮೇಶ್ವರ ರಾವ್ ಹೇಳಿದರು.
ಅವರು ಬಿ.ಸಿ.ರೋಡ್ ಲಯನ್ಸ್ ಸೇವಾ ಮಂದಿರದಲ್ಲಿ ನಡೆದ ಭತ್ತದ ಬೇಸಾಯ ವಿಚಾರ ಸಂಕೀರ್ಣದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.
ನೇತ್ರಾವತಿ ಕೃಷಿಕರ ಅಭಿವೃದ್ಧಿ ಸಂಘಗಳ ಒಕ್ಕೂಟ ಬಂಟ್ವಾಳ, ದಿಶಾ ಟ್ರಸ್ಟ್(ರಿ) ಕೈಕಂಬ ಇವರ ಜಂಟಿ ಆಶ್ರಯದಲ್ಲಿ ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆ ಅಭಿಯಾನ ಅಂಗವಾಗಿ ನಡೆದ ಕಾರ್‍ಯಾಗಾರದ ಉದ್ಘಾಟಣೆಯನ್ನು ನೇತ್ರಾವತಿ ಒಕ್ಕೂಟದ ಅದ್ಯಕ್ಷರಾದ ಶ್ರೀ. ಹರ್ಷೇಂದ್ರ ಹೆಗ್ಡೆ ಅಂತರಗುತ್ತು ಕೊಲ ಇವರು ಮಾಡಿದರು. ದಿಶಾ ಟ್ರಸ್ಟ್ ನಿರ್ದೇಶಕರಾದ ಸಿಲ್ವೆಸ್ಟರ್ ಡಿಸೋಜ ಸಭಾಧ್ಯಕ್ಷತೆ ವಹಿಸಿದ್ದರು. ವಿಚಾರ ಸಂಕಿರ್ಣದಲ್ಲಿ ದಿಶಾ ಸಂಸ್ಥೆಯ ಸಂಯೋಜಕರಾದ ಹೆನ್ರಿ ವಾಲ್ಡರ್ , ಭತ್ತದ ಕೃಷಿಕರಾದ ಶ್ರೀ.ಸುದರ್ಶನ ಶೆಟ್ಟಿ ಬಡಕಬೈಲು ,ಶ್ರೀ .ವಿಷ್ಣುಮೂರ್ತಿ ಭಟ್ ಪಲ್ಲಿಪಾಡಿ, ಶ್ರೀ. ಹಷೇಂದ್ರ ಹೆಗ್ಡೆ ಕೊಲ ತಮ್ಮ ವಿಚಾರ ಮಾಡಿಸಿದರು. ದಿಶಾ ಸಂಸ್ಥೆಯ ಕ್ಷೇತ್ರ ಸಂಯೋಕರಾದ ರುದೇಶ್ ಪ್ರಸ್ನಾವನೆಗೈದರು. ಕ್ಷೇತ್ರ ಮೇಲ್ವಿಚಾರಕಿ ಶ್ರೀಮತಿ. ಪ್ರಭಾವತಿ ಕಾರ್‍ಯಕ್ರಮ ನಿರೂಪಿಸಿ. ಕ್ಷೇತ್ರ ಮೇಲ್ವಿಚಾರಕಿ ವಿನೋದ ಸ್ವಾಗತಿಸಿ, ಕ್ಷೇತ್ರ ಮೇಲ್ವಿಚಾರಕಿ ರಂಜಿನಿ ಧನ್ಯವಾದ ನೀಡಿದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...