Thursday, January 29, 2026

ಸ್ವ-ಉದ್ಯೋಗ ತರಬೇತಿ

ಬಂಟ್ವಾಳ: ತಾಲೂಕು ಪಂಚಾಯತ್ ವತಿಯಿಂದ ತಾಲೂಕು ವ್ಯಾಪ್ತಿಯ ಗ್ರಾ.ಪಂ.ಮಟ್ಟದ ಸಂಜೀವಿನಿ ಒಕ್ಕೂಟ ಗಳ ಸ್ವ ಉದ್ಯೋಗ ತರಬೇತಿ ಹಾಗೂ ಮಾಹಿತಿ ಕಾರ್ಯಗಾರ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣ ದಲ್ಲಿ ಶುಕ್ರವಾರ ವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ರಾಜಣ್ಣ , ಮಹಿಳೆಯರು ಸ್ವ-ಉದ್ಯೋಗದ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಯಿತು.
ಸರಕಾರ ಬೇರೆಬೇರೆ ಕಾರ್ಯಕ್ರಮ ಗಳ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಯೋಜನೆ ಗಳನ್ನು ಹಾಕಿಕೊಂಡಿದೆ.
ಮಹಿಳೆಯರು ಇದರ ಪ್ರಯೋಜನ ಪಡೆಯಲು ಹೇಳಿದರು.

ಬಂಟ್ವಾಳ ತಾಲೂಕಿನ 58 ಗ್ರಾ.ಪಂ.ಗಳ ಪೈಕಿ 40 ಗ್ರಾ.ಪಂ.ಗಳಲ್ಲಿ NRLM ಸಂಜೀವಿನಿ ಯೋಜನೆ ಯಡಿ ಗ್ರಾ.ಪಂ.ಮಟ್ಟದ ಒಕ್ಕೂಟ ರಚನೆಯಾಗಿದ್ದು ಸ್ವಸಹಾಯ ಗುಂಪುಗಳಲ್ಲಿ ಜೀವನೋಪಾಯ ಚಟುವಟಿಕೆ ನಡೆಸಿ ಆರ್ಥಿಕ ವಾಗಿ ಸಬಲೀಕರಣಗೊಳಿಸಲು ಸ್ವಸಹಾಯ ಸಂಘ ದ ಸದಸ್ಯ ರಿಗೆ ಈ ಬಗ್ಗೆ ಅರಿವು ಮೂಡಿಸಿ ಸ್ವ ಉದ್ಯೋಗ ದ ಮೂಲಕ ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸತೀಶ್ ಮಾಬೆನ್ ಮಂಗಳೂರು, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರ ದ ಅಧಿಕಾರಿ ಪಾಂಡುರಂಗ ಕೆ. ಎನ್.ಆರ್.ಎಲ್.ಎಮ್.ನ ಜಿಲ್ಲಾ ಕಾರ್ಯ ಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ಸಿಡಾಕ್ ಮಂಗಳೂರು ಇದರ ಸಮಾಲೋಚಕಿ ಪ್ರವೀಶ್ಯ ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ ಕಾರ್ಯಕ್ರಮದ ರೂಪುರೇಷೆ ಗಳ ಬಗ್ಗೆ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಕುಶಾಲಪ್ಪ ವಂದಿಸಿದರು.

More from the blog

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...