Thursday, July 10, 2025

ಸ್ವ-ಉದ್ಯೋಗ ತರಬೇತಿ

ಬಂಟ್ವಾಳ: ತಾಲೂಕು ಪಂಚಾಯತ್ ವತಿಯಿಂದ ತಾಲೂಕು ವ್ಯಾಪ್ತಿಯ ಗ್ರಾ.ಪಂ.ಮಟ್ಟದ ಸಂಜೀವಿನಿ ಒಕ್ಕೂಟ ಗಳ ಸ್ವ ಉದ್ಯೋಗ ತರಬೇತಿ ಹಾಗೂ ಮಾಹಿತಿ ಕಾರ್ಯಗಾರ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣ ದಲ್ಲಿ ಶುಕ್ರವಾರ ವಾರ ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಣಾಧಿಕಾರಿ ರಾಜಣ್ಣ , ಮಹಿಳೆಯರು ಸ್ವ-ಉದ್ಯೋಗದ ಮೂಲಕ ಸಮಾಜದಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಯಿತು.
ಸರಕಾರ ಬೇರೆಬೇರೆ ಕಾರ್ಯಕ್ರಮ ಗಳ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಯೋಜನೆ ಗಳನ್ನು ಹಾಕಿಕೊಂಡಿದೆ.
ಮಹಿಳೆಯರು ಇದರ ಪ್ರಯೋಜನ ಪಡೆಯಲು ಹೇಳಿದರು.

ಬಂಟ್ವಾಳ ತಾಲೂಕಿನ 58 ಗ್ರಾ.ಪಂ.ಗಳ ಪೈಕಿ 40 ಗ್ರಾ.ಪಂ.ಗಳಲ್ಲಿ NRLM ಸಂಜೀವಿನಿ ಯೋಜನೆ ಯಡಿ ಗ್ರಾ.ಪಂ.ಮಟ್ಟದ ಒಕ್ಕೂಟ ರಚನೆಯಾಗಿದ್ದು ಸ್ವಸಹಾಯ ಗುಂಪುಗಳಲ್ಲಿ ಜೀವನೋಪಾಯ ಚಟುವಟಿಕೆ ನಡೆಸಿ ಆರ್ಥಿಕ ವಾಗಿ ಸಬಲೀಕರಣಗೊಳಿಸಲು ಸ್ವಸಹಾಯ ಸಂಘ ದ ಸದಸ್ಯ ರಿಗೆ ಈ ಬಗ್ಗೆ ಅರಿವು ಮೂಡಿಸಿ ಸ್ವ ಉದ್ಯೋಗ ದ ಮೂಲಕ ಬಡತನ ನಿರ್ಮೂಲನೆ ಮಾಡುವ ಉದ್ದೇಶದಿಂದ ಕಾರ್ಯಾಗಾರ ವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸತೀಶ್ ಮಾಬೆನ್ ಮಂಗಳೂರು, ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರ ದ ಅಧಿಕಾರಿ ಪಾಂಡುರಂಗ ಕೆ. ಎನ್.ಆರ್.ಎಲ್.ಎಮ್.ನ ಜಿಲ್ಲಾ ಕಾರ್ಯ ಕ್ರಮ ವ್ಯವಸ್ಥಾಪಕ ಹರಿಪ್ರಸಾದ್, ಸಿಡಾಕ್ ಮಂಗಳೂರು ಇದರ ಸಮಾಲೋಚಕಿ ಪ್ರವೀಶ್ಯ ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಪ್ರಶಾಂತ್ ಬಳಂಜ ಕಾರ್ಯಕ್ರಮದ ರೂಪುರೇಷೆ ಗಳ ಬಗ್ಗೆ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಕುಶಾಲಪ್ಪ ವಂದಿಸಿದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...