Tuesday, January 27, 2026

ರಾಷ್ಟ್ರೀಯ ಹೆದ್ದಾರಿ ಯ ಬದಿಯಲ್ಲಿ ಕೊಳೆತು ನಾರುತ್ತಿದೆ ತ್ಯಾಜ್ಯ: ನಿರ್ವಹಣೆ ಮಾಡದ ಇಲಾಖೆ

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸೇತುವೆ ಯ ಬಳಿಯಲ್ಲಿ ರಾಶಿ ರಾಶಿ ಕಸ ತ್ಯಾಜ್ಯ ಗಳು ತುಂಬಿಕೊಂಡು ದುರ್ವಾಸನೆ ಬೀರುತ್ತಿದೆ.
ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಯಲ್ಲಿ ದಿಬ್ಬದ ರೀತಿಯಲ್ಲಿ ಕಸ, ತ್ಯಾಜ್ಯ ರಾಶಿಯಾಗಿದ್ದು ಇದನ್ನು ವಿಲೇವಾರಿ ಮಾಡುತ್ತಿಲ್ಲ.
ಅನೇಕ ದಿನಗಳಿಂದ ತ್ಯಾಜ್ಯ ಕೊಳೆತು ನಾರುತ್ತಿದ್ದು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಚಲಿಸುವ ಪ್ರಯಾಣಿಕರಿಗಂತೂ ದುರ್ನಾತದಿಂದ ಅನುಭವ.
ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಹೋಗುವ ವೇಳೆ ಪಾಣೆಮಂಗಳೂರು ಹೊಸ ಸೇತುವೆ ದಾಟಿದ ಕೂಡಲೇ ರಸ್ತೆಯ ಎರಡು ಇಕ್ಕೆಲಗಳಲ್ಲಿ ಹಾಳೆ ಬಟ್ಟಲು, ಕೊಳೆತ ತ್ಯಾಜ್ಯ, ಪ್ಲಾಸ್ಟಿಕ್, ಹೀಗೆ ಇಲ್ಲಿ ಏನುಂಟು ಏನಿಲ್ಲ ಎಂದು ಹೇಳಲು ಅಸಾಧ್ಯ.
ಆದರೆ ರಾಶಿ ಹಾಕಿದ ಕಸವನ್ನು ವಿಲೇವಾರಿ ಮಾಡಲು ಸಂಬಂಧಿಸಿದ ಇಲಾಖೆ ಮುಂದಾಗುತ್ತಿಲ್ಲ.

 

ಕಾರಣ ಇಷ್ಟೇ ಈ ಭಾಗ ಯಾರಿಗೆ ಸೇರಿದ್ದು:
ಕಸ ಹಾಕುತ್ತಿರುವ ಪ್ರದೇಶ ಬಂಟ್ವಾಳ ‌ಪುರಸಭೆ ಮತ್ತು ನರಿಕೊಂಬು ಗ್ರಾಮ ಪಂಚಾಯತ್ ನ ಮಧ್ಯ ಭಾಗವಾಗಿರುವುದರಿಂದ ಇಲ್ಲಿ ಗಡಿ ವಿವಾದ ಉಂಟಾಗಿದೆ. ಪುರಸಭೆ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೈ ಜಾರಿಸಿದರೆ, ಇತ್ತ ನರಿಕೊಂಬು ಗ್ರಾಮ ಪಂಚಾಯತ್ ಇದು ನಮ್ಮ ದಲ್ಲ ಪುರಸಭೆಯದ್ಧು ಹೇಳಿ ಸುಮ್ಮನೆ ಕುಳಿತು ಕೊಂಡಿದೆ.‌ ಇವರಿಬ್ಬರ ಕೊಳಿ ಜಗಳದಿಂದ ಇಕ್ಕಟ್ಟಿಗೆ ಸಿಲುಕಿದ್ದು ರಾಶಿಯಾದ ತ್ಯಾಜ್ಯ.
ರಾಷ್ಟ್ರೀಯ ಹೆದ್ದಾರಿ ಅಗಿರುವುದರಿಂದ ಈ ಭಾಗದಲ್ಲಿ ಕಸವನ್ನು ಬೇಕಾಬಿಟ್ಟಿ ಎಸೆದು ಹೋಗುವುದು ತಪ್ಪು ಅಂತ ಕಸ ಎಸೆಯುವವರಿಗೆ ಯಾಕೆ ಮನವರಿಕೆ ಅಗುತ್ತಿಲ್ಲ ಎಂಬುದು ಕೂಡಾ ಇಲ್ಲಿ ಅತ್ಯಂತ ಪ್ರಮುಖ ಪ್ರಶ್ನೆಯಾಗಿದೆ.
ಸ್ವಚ್ಛ ತೆಯ ಬಗ್ಗೆ ಸಾಕಷ್ಟು ಕಾರ್ಯಕ್ರಮ ಗಳ ಮೂಲಕ ಅರಿವು ಮೂಡಿಸಿದ್ದರೂ ಪದೆ ಪದೇ ರಸ್ತೆಯಲ್ಲಿ ಕಸ ಎಸೆಯುವುದು ಸರಿಯಾ ಎಂಬ ಪ್ರಶ್ನೆ ಮಾಡಬೇಕಾಗಿದೆ.
ಪರಿಸರ ಸಂರಕ್ಷಣೆ ಮತ್ತು ಆರೋಗ್ಯ ಕಾಪಾಡುವಲ್ಲಿ ಸರಕಾರ ಇಲಾಖೆ ಜೊತೆಗೆ ಸಾರ್ವಜನಿಕರ ಪಾತ್ರ ಕೂಡಾ ಹಿರಿದಾಗಿದೆ.
ಸ್ವಚ್ಚತೆಯ ಪ್ರಶ್ನೆ ಬಂದಾಗ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ.
ಮಳೆಗಾಲ ಆರಂಭವಾಗುವ ಸಂಧರ್ಭದಲ್ಲಿ ಈ ರೀತಿಯಲ್ಲಿ ಕಸ ಬೀಸಾಡುವುದು ಸರಿಯಲ್ಲ, ಮಳೆ ನೀರಿಗೆ ಕೊಳೆತು ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಗಳು ಇವೆ.ಹಾಗಾಗಿ ಕಸ ಎಸೆಯುವ ಸಾರ್ವಜನಿಕ ರು ಎಚ್ಚರವಹಿಸಬೇಕು ಮತ್ತು ಪುರಸಭಾ ವ್ಯಾಪ್ತಿಯಲ್ಲಿ ರಾಶಿ ಬಿದ್ದಿರುವ ಕಸಗಳನ್ನು ದಿನೇ ದಿನೇ ವಿಲೇವಾರಿ ಮಾಡುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂಬುದೇ ಜನ ಆಗ್ರಹ. ನೀತಿ ಸಂಹಿತೆ ನೆಪದಲ್ಲಿ ಜನಪ್ರತಿನಿಧಿಗಳು ಮೌನವಾಗಿದ್ದಾರೆ.
ಅದೇ ವರದಾನವಾಗಿ ಸ್ವೀಕಾರ ಮಾಡಿದ ಅಧಿಕಾರಿ ವರ್ಗ ಯಾವುದೇ ಕೆಲಸಗಳನ್ನು ಮಾಡದೆ ಕೊಠಡಿಯಲ್ಲಿ ನಿದ್ದೆ ಮಾಡುತ್ತಿದ್ದಾರೆ.
ನೀತಿ ಸಂಹಿತೆ ಯಿಂದ ಅಧಿಕಾರಿ ವರ್ಗದವರನ್ನು ಹೇಳುವವರಿಲ್ಲ ಕೇಳುವವರಿಲ್ಲ ಎಂಬಂತೆ ಆಗಿದೆ..

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...