Thursday, February 13, 2025

ರಾಷ್ಟ್ರೀಯ ಹೆದ್ದಾರಿ ಯ ಬದಿಯಲ್ಲಿ ಕೊಳೆತು ನಾರುತ್ತಿದೆ ತ್ಯಾಜ್ಯ: ನಿರ್ವಹಣೆ ಮಾಡದ ಇಲಾಖೆ

ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪಾಣೆಮಂಗಳೂರು ಸೇತುವೆ ಯ ಬಳಿಯಲ್ಲಿ ರಾಶಿ ರಾಶಿ ಕಸ ತ್ಯಾಜ್ಯ ಗಳು ತುಂಬಿಕೊಂಡು ದುರ್ವಾಸನೆ ಬೀರುತ್ತಿದೆ.
ರಾಷ್ಟ್ರೀಯ ಹೆದ್ದಾರಿಯ ಎರಡು ಬದಿಯಲ್ಲಿ ದಿಬ್ಬದ ರೀತಿಯಲ್ಲಿ ಕಸ, ತ್ಯಾಜ್ಯ ರಾಶಿಯಾಗಿದ್ದು ಇದನ್ನು ವಿಲೇವಾರಿ ಮಾಡುತ್ತಿಲ್ಲ.
ಅನೇಕ ದಿನಗಳಿಂದ ತ್ಯಾಜ್ಯ ಕೊಳೆತು ನಾರುತ್ತಿದ್ದು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಚಲಿಸುವ ಪ್ರಯಾಣಿಕರಿಗಂತೂ ದುರ್ನಾತದಿಂದ ಅನುಭವ.
ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಹೋಗುವ ವೇಳೆ ಪಾಣೆಮಂಗಳೂರು ಹೊಸ ಸೇತುವೆ ದಾಟಿದ ಕೂಡಲೇ ರಸ್ತೆಯ ಎರಡು ಇಕ್ಕೆಲಗಳಲ್ಲಿ ಹಾಳೆ ಬಟ್ಟಲು, ಕೊಳೆತ ತ್ಯಾಜ್ಯ, ಪ್ಲಾಸ್ಟಿಕ್, ಹೀಗೆ ಇಲ್ಲಿ ಏನುಂಟು ಏನಿಲ್ಲ ಎಂದು ಹೇಳಲು ಅಸಾಧ್ಯ.
ಆದರೆ ರಾಶಿ ಹಾಕಿದ ಕಸವನ್ನು ವಿಲೇವಾರಿ ಮಾಡಲು ಸಂಬಂಧಿಸಿದ ಇಲಾಖೆ ಮುಂದಾಗುತ್ತಿಲ್ಲ.

 

ಕಾರಣ ಇಷ್ಟೇ ಈ ಭಾಗ ಯಾರಿಗೆ ಸೇರಿದ್ದು:
ಕಸ ಹಾಕುತ್ತಿರುವ ಪ್ರದೇಶ ಬಂಟ್ವಾಳ ‌ಪುರಸಭೆ ಮತ್ತು ನರಿಕೊಂಬು ಗ್ರಾಮ ಪಂಚಾಯತ್ ನ ಮಧ್ಯ ಭಾಗವಾಗಿರುವುದರಿಂದ ಇಲ್ಲಿ ಗಡಿ ವಿವಾದ ಉಂಟಾಗಿದೆ. ಪುರಸಭೆ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೈ ಜಾರಿಸಿದರೆ, ಇತ್ತ ನರಿಕೊಂಬು ಗ್ರಾಮ ಪಂಚಾಯತ್ ಇದು ನಮ್ಮ ದಲ್ಲ ಪುರಸಭೆಯದ್ಧು ಹೇಳಿ ಸುಮ್ಮನೆ ಕುಳಿತು ಕೊಂಡಿದೆ.‌ ಇವರಿಬ್ಬರ ಕೊಳಿ ಜಗಳದಿಂದ ಇಕ್ಕಟ್ಟಿಗೆ ಸಿಲುಕಿದ್ದು ರಾಶಿಯಾದ ತ್ಯಾಜ್ಯ.
ರಾಷ್ಟ್ರೀಯ ಹೆದ್ದಾರಿ ಅಗಿರುವುದರಿಂದ ಈ ಭಾಗದಲ್ಲಿ ಕಸವನ್ನು ಬೇಕಾಬಿಟ್ಟಿ ಎಸೆದು ಹೋಗುವುದು ತಪ್ಪು ಅಂತ ಕಸ ಎಸೆಯುವವರಿಗೆ ಯಾಕೆ ಮನವರಿಕೆ ಅಗುತ್ತಿಲ್ಲ ಎಂಬುದು ಕೂಡಾ ಇಲ್ಲಿ ಅತ್ಯಂತ ಪ್ರಮುಖ ಪ್ರಶ್ನೆಯಾಗಿದೆ.
ಸ್ವಚ್ಛ ತೆಯ ಬಗ್ಗೆ ಸಾಕಷ್ಟು ಕಾರ್ಯಕ್ರಮ ಗಳ ಮೂಲಕ ಅರಿವು ಮೂಡಿಸಿದ್ದರೂ ಪದೆ ಪದೇ ರಸ್ತೆಯಲ್ಲಿ ಕಸ ಎಸೆಯುವುದು ಸರಿಯಾ ಎಂಬ ಪ್ರಶ್ನೆ ಮಾಡಬೇಕಾಗಿದೆ.
ಪರಿಸರ ಸಂರಕ್ಷಣೆ ಮತ್ತು ಆರೋಗ್ಯ ಕಾಪಾಡುವಲ್ಲಿ ಸರಕಾರ ಇಲಾಖೆ ಜೊತೆಗೆ ಸಾರ್ವಜನಿಕರ ಪಾತ್ರ ಕೂಡಾ ಹಿರಿದಾಗಿದೆ.
ಸ್ವಚ್ಚತೆಯ ಪ್ರಶ್ನೆ ಬಂದಾಗ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ.
ಮಳೆಗಾಲ ಆರಂಭವಾಗುವ ಸಂಧರ್ಭದಲ್ಲಿ ಈ ರೀತಿಯಲ್ಲಿ ಕಸ ಬೀಸಾಡುವುದು ಸರಿಯಲ್ಲ, ಮಳೆ ನೀರಿಗೆ ಕೊಳೆತು ಸೊಳ್ಳೆ ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಗಳು ಇವೆ.ಹಾಗಾಗಿ ಕಸ ಎಸೆಯುವ ಸಾರ್ವಜನಿಕ ರು ಎಚ್ಚರವಹಿಸಬೇಕು ಮತ್ತು ಪುರಸಭಾ ವ್ಯಾಪ್ತಿಯಲ್ಲಿ ರಾಶಿ ಬಿದ್ದಿರುವ ಕಸಗಳನ್ನು ದಿನೇ ದಿನೇ ವಿಲೇವಾರಿ ಮಾಡುವ ಬಗ್ಗೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂಬುದೇ ಜನ ಆಗ್ರಹ. ನೀತಿ ಸಂಹಿತೆ ನೆಪದಲ್ಲಿ ಜನಪ್ರತಿನಿಧಿಗಳು ಮೌನವಾಗಿದ್ದಾರೆ.
ಅದೇ ವರದಾನವಾಗಿ ಸ್ವೀಕಾರ ಮಾಡಿದ ಅಧಿಕಾರಿ ವರ್ಗ ಯಾವುದೇ ಕೆಲಸಗಳನ್ನು ಮಾಡದೆ ಕೊಠಡಿಯಲ್ಲಿ ನಿದ್ದೆ ಮಾಡುತ್ತಿದ್ದಾರೆ.
ನೀತಿ ಸಂಹಿತೆ ಯಿಂದ ಅಧಿಕಾರಿ ವರ್ಗದವರನ್ನು ಹೇಳುವವರಿಲ್ಲ ಕೇಳುವವರಿಲ್ಲ ಎಂಬಂತೆ ಆಗಿದೆ..

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...