Thursday, February 13, 2025

ಧಾರ್ಮಿಕ ಕೇಂದ್ರಗಳ ಮೂಲಕ ಬದುಕಿಗೆ ಆತ್ಮವಿಶ್ವಾಸ ಸಿಗುತ್ತದೆ : ಒಡಿಯೂರು ಶ್ರೀ

ಬಂಟ್ವಾಳ:  ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಕೊಪ್ಪಳ, ಕೊದಂಟಿಯಡ್ಕ ಶಂಭೂರು ಧೂಮಾವತಿ ಬಂಟ ಸಪರಿವಾರ ದೈವಗಳ ದೈವಸ್ಥಾನದ ದೈವಗಳ ಪ್ರತಿಷ್ಠಾ ಮಹೋತ್ಸವ  ಕಾರ್ಯಕ್ರಮ ಪಳನೀರು ಅನಂತ ಭಟ್ ತಂತ್ರಿಯವರ ನೇತ್ರತ್ವದಲ್ಲಿ ಬೆಳಿಗ್ಗೆ 7.10 ರ ವೃಷಭ ಲಗ್ನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು , ಆರ್.ಎಸ್.ಎಸ್.ಪ್ರಮುಖ ಕಲ್ಲಡ್ಕ ಡಾ|ಪ್ರಭಾಕರ ಭಟ್ ಹಾಗೂ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಒಡಿಯೂರು ಕ್ಷೇತ್ರದ ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ , ಬದುಕಿಗೆ ಆತ್ಮವಿಶ್ವಾಸ ಸಿಗುವುದು ಇಂತಹ ಧಾರ್ಮಿಕ ಕೇಂದ್ರಗಳ ಮೂಲಕ. ಧಾರ್ಮಿಕ ಕೇಂದ್ರಗಳು ಉಳಿದಿರುವುದು ಬೆಳೆದಿರುವುದು ತುಳು ಬಾ಼ಷೆಯ ಮೂಲಕ. ತುಳು ಸಂಸ್ಕೃತಿಗೆ ಜಾನಪದ ಬಹಳ ಪ್ರಾಮುಖ್ಯತೆ ಪಡೆದಿದೆ. ಜಾನಪದಗಳ ಮೂಲಕ ಜಿಲ್ಲೆಯ ಜೀವನ ಶೈಲಿ ಅಡಗಿದೆ. ಹಾಗಾಗಿ ತುಳು ಭಾಷೆಗೂ ಜಾನಪದ ಕ್ಕೂ ಅವಿನಾಭಾವ ಸಂಬಂಧ ಇದೆ ಎಂದು ಅವರು ಹೇಳಿದರು. ‌ತುಳು ಭಾಷೆಯ ಮೂಲಕ ಜಿಲ್ಲೆಯ ಧರ್ಮ  ಉಳಿದಿದೆ.
ತುಳು ಭಾಷೆಗಳನ್ನು ಮಕ್ಕಳಿಗೆ ತಿಳಿಸುವ ಕೆಲಸ ಪ್ರತಿ ತಾಯಂದಿರು ಮಾಡಬೇಕಾಗಿದೆ.ಅಮೂಲಕ ಶೃದ್ದಾ ಭಕ್ತಿಯ ಗೌರವ ಉಳಿಸುವ ಕೆಲಸ ಮಾಡಬೇಕು ಎಂದರು.
 ಧಾರ್ಮಿಕ ಕಾರ್ಯಕ್ರಮಳು ತುಳು ಭಾಷೆಗಳ ಮೂಲಕ  ಮತ್ತು ದೈವ  ದೇವರುಗಳ ಆರಾಧನೆ ನಡೆಯಲಿ, ಇತ್ತೀಚಿನ ದಿನಗಳಲ್ಲಿ ಬಾರೀ ಬದಲಾವಣೆಯಿಂದ ಶೃದ್ದಾಕೇಂದ್ರಗಳ , ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದರು. ಧಾರ್ಮಿಕ ಕೇಂದ್ರಗಳ ಬೆಳವಣಿಗೆ ಗೆ ಒಗ್ಗಟ್ಟಿನ ಕೆಲಸ ಮಾಡೋಣ ಎಂದರು.
ಮೂಲನಂಬಿಕೆ ಗಟ್ಟಿಯಾಗಲು ತಿಳಿವಳಿಕೆಯ ಜ್ಞಾನ ವನ್ನು ವೃದ್ದಿಸಬೇಕು.  ನಾಲಿಗೆಯಲ್ಲಿ ಸಂಪತ್ತ ಆಪತ್ತುಗಳೆರಡು ಉಂಟು. ಹಾಗಾಗಿ ಮಾತು ಮುತ್ತಿನಂತೆ ಇರಲಿ ಎಂದರು.
ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಮಾಜಿ ಮುಖ್ಯ ಮಂತ್ರಿಯವರ ಆಪ್ತ ಕಾರ್ಯದರ್ಶಿ ಜಗನ್ನಾಥ ಬಂಗೇರ ವಹಿಸಿದ್ದರು.
ಕರ್ನಾಟಕ ರಾಜ್ಯ ಸಂಸ್ಕಾರ ಭಾರತಿ ಲೋಕ ಕಲಾ ವಿಭಾಗ ಪ್ರಮುಖ್ ತುಳುವ ಬೊಳ್ಳಿ ದಯಾನಂದ ಜಿ.ಕತ್ತಲಸಾರ್ ಧಾರ್ಮಿಕ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಗೌರವ ಸಲಹೆಗಾರರಾದ ಗುತ್ತಿನ ಮನೆಯವರು, ದಕ್ಷಿಣದ ಶಿರ್ಡಿ ಸಾಯಿಬಾಬಾ ಮಂದಿರದ ಅಧ್ಯಕ್ಷ ಸೂರಜ್ ಕುಮಾರ್ ಶಂಭೂರು, ಬೊಂಡಾಲ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ, ಉದ್ಯಮಿಗಳಾದ ರಘು ಸಪಲ್ಯ, ಪ್ರವೀಣ್ ಕುಮಾರ್, ಪದ್ಮನಾಭ ಮಯ್ಯ, ಶರತ್ ಶೆಟ್ಟಿ ಕಕ್ಕೆಮಜಲು, ನವೀನ್ ಶೆಟ್ಟಿ, ಜಗನ್ನಾಥ್ ಶೆಟ್ಟಿ, ಪ್ರಶಾಂತ್ ಕೊಪ್ಪಳ, ರಾಜೇಶ್ ಜೀವಿತ ಕುಲಾಲ್ ಮುಂಬಾಯಿ ಹಾಗೂ ಸಮಿತಿ ಕಾರ್ಯದರ್ಶಿ ಕೇಶವ ಬರ್ಕೆ, ಉಪಾಧ್ಯಕ್ಷರುಗಳಾದ ಪ್ರಶಾಂತ್ ಕೊಪ್ಪಳ, ರಾಜೇಶ್ ಶೇಡಿಗುರಿ, ನೋಣಯ್ಯ ರೆಂಜಮಾರು, ಗಣೇಶ್ ಪ್ರಸಾದ್  ಭಂಡಾರದ ಮನೆ, ನಿರಂಜನ ಕೊಲ್ಲೂರು, ಕೋಶಾಧಿಕಾರಿ ಬೋಜರಾಜ್ ಕೊಪ್ಪಳ, ಜೊತೆ ಕಾರ್ಯದರ್ಶಿ ಗಳಾದ ರಾಮಚಂದ್ರ ಪದೆಂಜಿಮಾರ್, ದಿನೇಶ್ ರವುಲುಮಜಲ್, ತೇಜಸ್ ಬರ್ಕೆ, ದಯಾನಂದ ಅಡೆಪಿಲ, ಸತೀಶ್ ಕೊಪ್ಪಳ ಹಾಗೂ ಊರಿನ ಭಕ್ತರು ಮತ್ತಿತರರು ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಆನಂದ ಎ. ಶಂಭೂರು ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿ ಗಳನ್ನು ಸ್ವಾಗತಿಸಿದರು.
ಕೇಶವ ಬರ್ಕೆ ಧನ್ಯವಾದ ನೀಡಿದರು. ಜಿನ್ನಪ್ಪ ಕುದ್ರೆಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ದೇವಸ್ಥಾನ ದ ಜೀರ್ಣೋದ್ಧಾರ ಕ್ಕೆ ಶ್ರಮಿಸಿದ ದಾನಿಗಳನ್ನು, ಕಟ್ಟಡ ನಿರ್ಮಾಣ ಮಾಡಿದವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...