Thursday, February 13, 2025

ಬಂಟ್ವಾಳ ತಾಲೂಕಿನ ಗ್ರಾ.ಪಂ.ಅಭಿವೃದ್ಧಿಯಲ್ಲಿ ಹಿಂದೆ: ಜಿ.ಪಂ.ಸಿ.ಒ.ಡಾ| ಸೆಲ್ವಮಣಿ

ಬಂಟ್ವಾಳ: ತಾಲೂಕಿನ ಬಹುತೇಕ ಗ್ರಾ.ಪಂ.ಗಳು ಅಭಿವೃದ್ದಿಯಲ್ಲಿ ಹಿಂದೆ ಉಳಿದಿದೆ, ಎಂದು ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ| ಸೆಲ್ವಮಣಿ ಅಸಮಾಧಾನ ವ್ಯಕ್ತಪಡಿಸಿದರು.

ಬಂಟ್ವಾಳ ತಾಲೂಕಿನ ಪಿಡಿಒ ಗಳ ತಾಲೂಕಿನ‌ ವಿವಿಧ ಇಲಾಖಾ ಅಧಿಕಾರಿಗಳ ಅಭಿವೃದ್ಧಿ ಪ್ರಗತಿ ಪರಿಶೀಲನೆ ಸಭೆ ತಾಲೂಕು ಪಂಚಾಯತ್ ನ ಎಸ್. ಜಿ.ಎಸ್.ವೈ ಸಭಾಂಗಣ ದಲ್ಲಿ ಬುಧವಾರ ಮಧ್ಯಾಹ್ನ ನಡೆಯಿತು.
ಈ ಸಭೆಯಲ್ಲಿ ಸಿ.ಒ.ಡಾ| ಸೆಲ್ವಮಣಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ತಾಲೂಕಿನ ಗ್ರಾ.ಪಂ.ಗಳಿಗೆ ನೀಡಿದ ವಾರ್ಷಿಕ ಶೇ.ವಾರು ಗುರಿಯನ್ನು ತಲುಪದೆ ಇರುವ ಬಗ್ಗೆ ಸಿ.ಒ.ಅವರು ಗರಂ ಅದರಲ್ಲದೆ ಬಂಟ್ವಾಳ ತಾ.ಪಂ.ಕಾರ್ಯನಿರ್ವಾಣಾಧಿಕಾರಿ ರಾಜಣ್ಣ ಅವರ ಮೇಲೆ ಕ್ರಮಕೈಗೊಳ್ಳವ ಬಗ್ಗೆ ಎಚ್ಚರಿಕೆ ನೀಡಿದರು.
ಮೇ.ತಿಂಗಳ ಅಂತ್ಯದ ವೆರಗೂ ಕಾಮಗಾರಿ ಪೂರ್ಣಗೊಳಿಸದೆ ಮಳೆ ಬರುವ ಜೂನ್ ತಿಂಗಳಲ್ಲಿ ಕಾಮಗಾರಿ ಹೇಗೆ ಪೂರ್ಣಗೊಳಿಸುತ್ತೀರಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಎಲ್ಲಾ ಗ್ರಾಮ ವ್ಯಾಪ್ತಿಯ ಲ್ಲಿ ಬಹುತೇಕ ಕಾಮಗಾರಿಗಳ ಪೈಕಿ ತೋಟಗಾರಿಕಾ ಇಲಾಖೆಗೆ ಸಂಬಂಧಿಸಿದ ಕಾಮಾಗಾರಿಗಳು ಮಾತ್ರ ಬಾಕಿ ಉಳಿದಿರುವುದು ಮೇಲ್ನೋಟಕ್ಕೆ ಗಮನಕ್ಕೆ ಬಂದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾ.ಪಂ.ಪಿಡಿಒಗಳು ತಾಂತ್ರಿಕ ಸಮಸ್ಯೆ ಯ ಬಗ್ಗೆ ದೂರು ಮುಂದಿಟ್ಟಾಗ , ದ.ಕ.ಜಿಲ್ಲೆ ಯ ಪ್ರತಿ ಗ್ರಾ.ಪಂ. ತಂತ್ರಜ್ಞಾನ ದಲ್ಲಿ ಮುಂದುವರಿದಿದ್ದು ನೀವೂ ಅಭಿವೃದ್ಧಿ ಕಾರ್ಯದಲ್ಲಿ ಹಿಂದುಳಿದರೆ, ಉತ್ತರಕನ್ನಡ ಜಿಲ್ಲೆಯಲ್ಲಿ ಯಾವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಅವರು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಉಪಕಾರ್ಯದರ್ಶಿ ಮಹೇಶ್, ನೆರವು ಘಟಕದ ಸಂಚಾಲಕಿ ಮಂಜುಳಾ, ತಾ.ಪಂ.ಕಾರ್ಯನಿರ್ವಾಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...