Sunday, January 25, 2026

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ಶಿಲಾನ್ಯಾಸ ಕಾರ್ಯಕ್ರಮ

ಬಂಟ್ವಾಳ : ಪುರಾಣ ಪ್ರಸಿದ್ಧ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸುಮಾರು 2 ಕೋ. ರೂ ವೆಚ್ಚದಲ್ಲಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಆ ಪ್ರಯುಕ್ತ ಮೇ 17ರಂದು ಶ್ರೀ ಕ್ಷೇತ್ರದಲ್ಲಿ ನೂತನ ದೇವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಮೊಕ್ತೇಸರ ಕೆ. ವಾಸುದೇವ ಆಸ್ರಣ್ಣ ಅವರು ಶಿಲಾನ್ಯಾಸ ನೆರವೇರಿಸಿ, ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿ ಮಾತನಾಡಿ, ಭಕ್ತಾಧಿಗಳು ಒಟ್ಟು ಸೇರಿದಾಗ ದೇವಸ್ಥಾನದ ಪುನರುತ್ಥಾನ ಸಾಧ್ಯ. ಭಕ್ತರ ಭಕ್ತಿಯ ಶ್ರಮದಿಂದ ದೇವಸ್ಥಾನ ಬೆಳಗುವುದು ಎಂದು ಹೇಳಿದರು.

ಹೊಸ್ಮಾರು, ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿ ಮಾತನಾಡಿ, ಭಕ್ತಿಗೆ ದೇವರ ಅನುಗ್ರಹವಿದೆ. ತಮ್ಮ ಆರಾಧ್ಯ ದೇವರ ಕ್ಷೇತ್ರವನ್ನು ಅಭಿವೃದ್ಧಿ ಗೊಳಿಸಿದರೆ ಇಷ್ಟಾರ್ಥ ಸಿದ್ಧಿಯಾಗುವುದು. ದುರ್ಗೆ ಧುರಿತ ನಿವಾರಕಿಯಾಗಿದ್ದು, ಭಕ್ತರ ಮನಸ್ಸಿನ ಸಂಕಲ್ಪ ಈಡೇರಿಸುತ್ತಾಳೆ ಎಂದರು.
ಶ್ರೀ ಕ್ಷೇತ್ರ ಒಡಿಯೂರಿನ ಸಾಧ್ವಿ ಮಾತಾನಂದಮಯಿ ಅವರು ಆಶೀರ್ವಚನ ನೀಡಿ, ಊರಿಗೆ ದೇಗುಲ ಶೃಂಗಾರ, ದೇವಸ್ಥಾನವೆಂಬುದು ಸಂಸ್ಕೃತಿಯ ಅಡಿಗಲ್ಲು. ಗ್ರಾಮದ ಸೌಭಾಗ್ಯ. ಭಕ್ತಿಯ ಹೆಜ್ಜೆಯೊಂದಿಗೆ ಭಕ್ತರು ಸಾಗಿದಾಗ ದೇವಸ್ಥಾನ ನಿರ್ಮಾಣ ಸುಲಭ ಸಾಧ್ಯವಾಗುವುದು ಎಂದ ಅವರು ಬಿರು ಬೇಸಿಗೆಯಿಂದ ಎಲ್ಲರೂ ಕಂಗೆಟ್ಟಿದ್ದು, ಮಳೆಗಾಗಿ ಎಲ್ಲರೂ ಪ್ರಾರ್ಥಿಸಬೇಕು ಎಂದು ಹೇಳಿದರು.
ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ, ಮಾಜಿ ಸಚಿವ ಅಮರನಾಥ ಶೆಟ್ಟಿ ಮೂಡುಬಿದಿರೆ, ಉದ್ಯಮಿ ಶ್ರೀಪತಿ ಭಟ್, ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಬಾಬು ಪೂಜಾರಿ ಕೌಡಾಡಿಗುತ್ತು, ಭೊಜರಾಜ ಶೆಟ್ಟಿ ಕೊರಗಟ್ಟೆ, ಬೆಂಗಳೂರು ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ ಉಪಸ್ಥಿತರಿದ್ದರು.
ಪ್ರ.ಕಾರ್ಯದರ್ಶಿ ಯೋಗೀಶ್ ಕಲಸಡ್ಕ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭರತ್ ಕುಮಾರ್ ಜೈನ್ ಸೇವಾ ವಂದಿಸಿದರು. ರಂಗ ಕಲಾವಿದ ಎಚ್ಕೇ ನಯನಾಡು ಕಾರ್ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...