Wednesday, February 12, 2025

ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ನೀರಿನ ಕೊರತೆ ಇಲ್ಲ : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಪುರಸಭೆ ವ್ಯಾಪ್ತಿಯ ಜನರಿಗೆ ನೀರೊದಗಿಸಲು ಇನ್ನು ಹತ್ತು ದಿವಸಕ್ಕಾಗುವಷ್ಟು ನೀರಿದೆ. ನೀರಿನ ಕೊರತೆ ಇಲ್ಲ,
ಮಿತಬಳಕೆಯ ಕುರಿತು ಜಾಗೃತಿಯೂ ಇರಲಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.
ಬುಧವಾರ ಮಧ್ಯಾಹ್ನ ಬಂಟ್ವಾಳದ ನೇತ್ರಾವತಿ ತೀರದಲ್ಲಿ ನೀರಿನ ಲಭ್ಯತೆ ಕುರಿತು ವೀಕ್ಷಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನಿತ್ಯ ಅಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ಮಾಡುತ್ತಿದ್ದೇವೆ. ಸಮಸ್ಯೆ ಬಾರದಂತೆ ನೀರನ್ನು ಒದಗಿಸಲು ಪ್ರಯತ್ನ ಮಾಡುತ್ತಿದ್ದೇವೆ. ಜನರು ನೀರಿನ ಮಹತ್ವ ಪಡೆಯೇಕು ಎಂದರು.

 

ನೀರಿನ ಹರಿವು ಎಲ್ಲೆಲ್ಲಿದೆಯೋ ಅದನ್ನು ಉಪಯೋಗಿಸಲು ಸೂಚನೆ ನೀಡಲಾಗಿದೆ. ಪುರವಾಸಿಗಳು ಆದಷ್ಟು ನೀರನ್ನು ಮಿತವಾಗಿ ಬಳಸಲು ಅಭ್ಯಾಸ ಮಾಡಿಕೊಳ್ಳಬೇಕು. ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ನೀರಿಲ್ಲ ಎಂಬ ಚಿಂತೆ ಬೇಡ, ಹಾಗೆಯೇ ಅದರ ಬಗ್ಗೆ ಜಾಗೃತಿಯೂ ಇರಲಿ ಎಂದರು.
ಜಾಕ್ ವೆಲ್ ನಿಂದ ಒಂದು ಕಿ.ಮೀನಷ್ಟು ಜಾಗದಲ್ಲಿ ಈ ಜಲಮೂಲವಿದ್ದು, ಇಲ್ಲಿಂದ ಜಾಕ್ ವೆಲ್ ಇದ್ದ ಪ್ರದೇಶಕ್ಕೆ ನೀರು ಹರಿಯುವಂತೆ ಮಾಡಿ ಲಿಫ್ಟ್ ಮಾಡುವ ಪ್ರಕ್ರಿಯೆಗೆ ತತ್ ಕ್ಷಣದಿಂದ ಚಾಲನೆ ನೀಡಲಾಗಿದೆ. ಇದಾದರೆ ಬಂಟ್ವಾಳಕ್ಕೆ ನೀರಿನ ಕೊರತೆ ಆಗುವುದಿಲ್ಲ ಎಂಬ ನಂಬಿಕೆ ಅಧಿಕಾರಿಗಳದ್ದು. ಈಗ 5 ಎಂಎಲ್ ಡಿಯಷ್ಟು ನೀರೊದಗಿಸುವ ಸಾಮರ್ಥ್ಯ ಹೊಂದಿದ್ದು, ಒಟ್ಟು ದಿನವಹಿ 8 ಎಂಎಲ್ ಡಿ ನೀರು ಬಂಟ್ವಾಳ ಜನರಿಗೆ ಪೂರೈಸಬೇಕಾಗುತ್ತದೆ ಎಂದರು.
ಶಾಸಕರೊಂದಿಗೆ ಪುರಸಭೆ ಸದಸ್ಯ ಎ.ಗೋವಿಂದ ಪ್ರಭು, ಜಿಪಂ ಸದಸ್ಯ ಎ.ತುಂಗಪ್ಪ ಬಂಗೇರ, ಮಾಜಿ ಪುರಸಭೆ ಸದಸ್ಯ ದೇವದಾಸ ಶೆಟ್ಟಿ, ಎಂಜಿನಿಯರುಗಳಾದ ಡೊಮಿನಿಕ್ ಡಿಮೆಲ್ಲೊ, ಶೋಭಾಲಕ್ಷ್ಮೀ ಉಪಸ್ಥಿತರಿದ್ದರು.

42 ಬೋರ್ ವೆಲ್ ಗಳು ಪುರಸಭೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿವೆ. ಯಾರೂ ಗಾಬರಿಪಡುವ ಅಗತ್ಯವಿಲ್ಲ. ಶುದ್ಧ ನೀರು ವಿತರಣೆಯಾಗುತ್ತಿದ್ದು, ಪಲ್ಲಿಗುಡ್ಡ ಪ್ರದೇಶದಿಂದಲೂ ನೀರನ್ನು ಪಡೆಯುವ ಕುರಿತು ಪ್ರಯತ್ನ ಮಾಡುತ್ತಿದ್ದೇವೆ. ಮುಂದಿನ 10 ದಿನಗಳಿಗೆ ಆಗುವಷ್ಟು ನೀರಿದೆ.
– ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಶಾಸಕರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...