Thursday, January 29, 2026

ಸ್ವಚ್ಚ ಸೋಚ್ ವಿಚಾರ ಸಂಕಿರಣ

ಬಂಟ್ವಾಳ: ಮಂಗಳೂರಿನ ರಾಮಕೃಷ್ಣ ಮಿಷನ್ ಇವರ ಸಹಯೋಗದಲ್ಲಿ ವಾಮದಪದವು ಸರಕಾರಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಯುವ ರೆಡ್ ಕ್ರಾಸ್ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ “ಸ್ವಚ್ಛ ಸೋಚ್” ವಿಚಾರ ಸಂಕಿರಣ ಕಾಲೇಜಿನಲ್ಲಿ ನಡೆಯಿತು. ಭಾರತೀಯ ಭೂಸೇನೆಯ ನಿವೃತ್ತ ಅಧಿಕಾರಿ ಗೋಪಿನಾಥರಾವ್ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ಇಂದಿನ ಆಧುನಿಕಜಗತ್ತಿನಲ್ಲಿ ತ್ಯಾಜ್ಯ ವಿಲೇವಾರಿ ಎಂಬುದು ದೊಡ್ಡ ಸಮಸ್ಯೆ ಆಗಿದ್ದು, ಜಗತ್ತಿನ ಪ್ರತಿಯೊಬ್ಬ ನಾಗರೀಕನು ಬಾಹ್ಯ ಹಾಗೂ ಆಂತರಿಕ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಬಿ. ಶೆಟ್ಟಿ ಕಾರ್ಯಕ್ರಮದ ಅಧ್ಯಕತೆ ವಹಿಸಿದ್ದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕರು, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ಡಾ.ರವಿ ಎಂ.ಎನ್. ಪ್ರಸ್ತಾವನೆಗೈದರು.ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಸಂಯೋಜನಾಧಿಕಾರಿ ರಂಜನ್ ಬೆಳ್ಳರ್ಪಾಡಿ ಹಾಗೂ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನದ ಸಂಪನ್ಮೂಲ ವ್ಯಕ್ತಿ ಪ್ರೊ. ರಾಜಮಣಿರಾಮಕುಂಜ, ಮತ್ತು ರೇಂಜರ್ ಲೀಡರ್ ಪ್ರೊ. ಉಷಾ ಬಿ. ಹಾಗೂ ಎನ್, ಎಸ್.ಎಸ್. ಘಟಕದ ಯೋಜನಾಧಿಕಾರಿಗಳಾದ ಡಾ. ಮೆರಿ ಎಂ. ಜೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಚಾರ ಸಂಕಿರಣದ ಸಂಯೋಜಕರಾದ ಪ್ರೊ.ಕೃಷ್ಣಮೂರ್ತಿಎನ್.ಬಿ. ಸ್ವಾಗತಿಸಿ, ಎನ್, ಎಸ್.ಎಸ್. ಘಟಕದ ಯೋಜನಾಧಿಕಾರಿಗಳಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರೆಯಾ ವಂದಿಸಿದರು.
ಬಳಿಕ ನಡೆದ ಮೊದಲ ಗೋಷ್ಠಿಯಲ್ಲಿ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಪ್ರೊ. ರಾಜಮಣಿ ರಾಮಕುಂಜ ತ್ಯಾಜ್ಯ ನಿರ್ಮಾಣವಾಗುವ ಮತ್ತು ಅದರಿಂದಾಗುುವ ಸಮಸ್ಯೆಯ ಬಗ್ಗೆ ವಿಚಾರ ಮಂಡಿಸಿ, ವಿದ್ಯಾರ್ಥಿಗಳ ಪ್ರಶ್ನೋತ್ತರಗಳಿಗೆ ಉತ್ತರಿಸಿದರು. ಎರಡನೆ ಗೋಷ್ಠಿಯಲ್ಲಿ ರಾಮಕೃಷ್ಣ ಮಿಷನ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಸಂಯೋಜನಾಧಿಕಾ ರಂಜನ್ ಬೆಳ್ಳರ್ಪಾಡಿ ಇವರು ತ್ಯಾಜ್ಯ ವಿಲೇವಾರಿ ಮಾಡುವ ಕ್ರಮಗಳು, ಅದರ ನಿರ್ವಹಣೆ ಮತ್ತು ಒಣ ಕಸ, ಹಸಿ ಕಸ ಮತ್ತು ಪ್ಲಾಸ್ಟಿಕ್-ಗಾಜಿನ ಕಸವನ್ನು ಬೇರ್ಪಡಿಸಿ ಅದನ್ನು ಗೊಬ್ಬರವಾಗಿ ಬಳಸುವ ರೀತಿಯನ್ನು ಪ್ರಾಯೋಗಿಕವಾಗಿ ತಿಳಿಸಿದರು. ಜೊತೆಗೆ ಸ್ವಚ್ಛತಾ ಅಭಿಯಾನದ ಜಾಗೃತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಹೇಗಿರಬೇಕು ಎಂಬುದರ ಬಗ್ಗೆ ವಿದ್ಯಾರ್ಥಿಗಳೊಡನೆ ಸಂವಾದ ನಡೆಸಿದರು. ಈ ವಿಚಾರ ಸಂಕಿರಣದಲ್ಲಿ ಯುವ ರೆಡ್‌ಕ್ರಾಸ್ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಎಂ.ಕಾಂ. ಸ್ನಾತ್ತಕೋತ್ತರ ವಿಭಾಗದ ಒಟ್ಟು 240 ವಿದ್ಯಾರ್ಥಿಗಳು ಭಾಗವಹಿಸಿ, ಇದರ ಪ್ರಯೋಜನ ಪಡೆದರು.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...