Wednesday, July 9, 2025

ಬಸ್ ಬೇ ಮತ್ತು ಪಿ.ಎಲ್.ಡಿ.ಬ್ಯಾಂಕ್ ಮುಂಭಾಗದಲ್ಲಿ ನೀರು ನಿಲ್ಲದಂತೆ ಕ್ರಮಕೈಗೊಳ್ಳಲು ಶಾಸಕ ರಾಜೇಶ್ ನಾಯ್ಕ್ ಸೂಚನೆ

ಬಂಟ್ವಾಳ: ಬಿ.ಸಿ.ರೋಡಿನಿಂದ ಮಂಗಳೂರು ಕಡೆಗೆ ಪ್ರಯಾಣಿಸಲು ಪ್ರಯಾಣಿಕರು ನಿಲ್ಲುವ ಬಸ್ ಬೇ ಮತ್ತು ಬಿಸಿರೋಡಿನ ಕೃಷಿ ಸಹಕಾರಿ ಬ್ಯಾಂಕ್ ನ ಕಟ್ಟಡದ ಮುಂಭಾಗದಲ್ಲಿ ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ನಿಂತು ಸಾರ್ವಜನಿಕರಿಗೆ ಬಹಳಷ್ಟು ತೋಂದರೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಶಾಸಕ ರಾಜೇಶ್ ನಾಯ್ಕ್ ಅವರು ಮತ್ತು ಎ.ಸಿ.ರವಿಚಂದ್ರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸ್ಥಳಕ್ಕೆ ಪುರಸಭಾ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಅವರನ್ನು ಕರೆಯಿಸಿ ಸಮಸ್ಯೆ ಯನ್ನು ಬಗೆಹರಿಸುವ ನಿಟ್ಟಿನಲ್ಲಿ ನೀರು ನಿಲ್ಲದಂತೆ ಸಿಮೆಂಟ್ ಹಾಕಲು ಸೂಚನೆ ನೀಡಿದರು.
ಕಳೆದ ಮಳೆಗಾಲ ದ ವೇಳೆ ಇಲ್ಲಿ ನೀರು ನಿಂತು ಸಾರ್ವಜನಿಕರು , ಪ್ರಯಾಣಿಕರು ಅನೇಕ ತೊಂದೆರೆ ಅನುಭವಿಸಿದ್ದರು.
ಈ ದೂರಿನ ಹಿನ್ನೆಲೆಯಲ್ಲಿ ಮಳೆ ಆರಂಭವಾಗುವ ಮೊದಲೇ ಶಾಸಕರು ಪುರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಶೀಘ್ರವಾಗಿ ಕೆಲಸ ಮಾಡುವಂತೆಯೂ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಮೇಬಲ್ ಡಿ.ಸೋಜ, ಬಂಟ್ವಾಳ ಎ.ಎಸ್.ಪಿ.ಸೈದುಲು ಅಡಾವತ್, ಬಂಟ್ವಾಳ ನಗರ ಪೋಲೀಸ್ ಸಬ್ ಇನ್ಸ್ ಪೆಕ್ಟರ್ ಚಂದ್ರಶೇಖರ್, ಟ್ರಾಫಿಕ್ ಎಸ್.ಐ.ಮಂಜುನಾಥ್ ಹಾಗೂ ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಗೋವಿಂದ ಪ್ರಭು, ಜನಾರ್ಧನ ಬೊಂಡಾಲ, ಸುರೇಶ್ ಕುಲಾಲ್ ,ಪವನ್, ಮಂಜು, ರಮಾನಾಥ ರಾಯಿ, ಮನೋಜ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...