Thursday, July 10, 2025

ಡ್ರಜ್ಜಿಂಗ್ ಮೆಷಿನ್ ಬಳಸಿ‌ ಹೂಳು ತೆಗೆಸಿದ ಫಲವಾಗಿ ನೀರು ಹರಿಯುತ್ತಿರುವ ದೃಶ್ಯ

 

ಬಂಟ್ವಾಳ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಶಾಸಕ ರಾಜೇಶ್ ನಾಯ್ಕ್ ಅವರು ಕೈಗೊಂಡ ಮಹತ್ವದ ಕಾರ್ಯ ಫಲ ನೀಡಿದೆ.
ಡ್ರಜ್ಜಿಂಗ್ ಮೆಷಿನ್ ಮೂಲಕ ಎಂ.ಆರ್.ಪಿ.ಎಲ್.ನ ಹೂಳು ತೆಗೆದಾಗ ನೀರು ಹೊರಗೆ ಹರಿಯಿತು.

ಕುಡಿಯುವ ನೀರಿನ ಸಮಸ್ಯೆ ಉಂಟಾದ ವೇಳೆ ಎಂ.ಆರ್.ಪಿ.ಎಲ್ ಡ್ಯಾಂ ನಲ್ಲಿ ನೀರು ಸ್ಟಾಕ್ ಇದೆ ಆದರೆ ಅ ನೀರು ಕೆಳಗೆ ಹೋಗಲು ವ್ಯವಸ್ಥೆ ಇಲ್ಲದೆ ಉಪಯೋಗ ಕ್ಕೆ ಸಿಗುತ್ತಿಲ್ಲ ಎಂಬ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದ ಶಾಸಕ ರಾಜೇಶ್ ನಾಯಕ್ ಅವರು ಎಂ.ಆರ್.ಪಿ.ಎಲ್.ಡ್ಯಾಂ ನ ಲ್ಲಿ ಹೂಳು ತುಂಬಿದ್ದು ನೀರಿನ ಹರಿಗೆ ತೊಂದರೆ ಯಾಗಿದೆ ಎಂದು ಮನಗಂಡರು.
ಕೂಡಲೇ ಸ್ಥಳಕ್ಕೆ ಡ್ರಜ್ಜಿಂಗ್ ಮೆಷಿನ್ ಕರೆಯಿಸಿ ಹೂಳು ತೆಗೆಸಿದರು.


ಎಂ.ಅರ್.ಪಿ.ಎಲ್.ನಿಂದ ನೀರು ಕೆಳಗೆ ಹರಿದರೆ ಹಿಂದಿನ ಕಾಲದ ಬೋಟ್ ವೇ ಮೂಲಕ ನೇರವಾಗಿ ತುಂಬೆವರೆಗೆ ನೀರು ಬರುವ ಲೆಕ್ಕಾಚಾರ ಇವರದು.
ಬೋಟ್ ವೇ ಯಲ್ಲಿ ಕೆಲವೊಂದು ಕಡೆಗಳಲ್ಲಿ ಮರಳು ಹಾಗೂ ಬಂಡೆ ಕಲ್ಲುಗಳು ಅಡ್ಡವಾಗಿವೆ ಅದನ್ನು ತೆರವುಗೊಳಿಸುವಂತೆಯೂ ಸೂಚನೆ ನೀಡಿದ್ದರು.

ಡ್ರೆಜ್ಜಿಂಗ್ ಮೂಲಕ ಮರಳು ತೆರವು ಮಾಡಿದ ಬಳಿಕ ಎಂ ಆರ್ ಪಿ ಎಲ್ ಡ್ಯಾಂ ನಿಂದ ನೀರು ಕೆಳಗೆ ಇಂದು ಹರಿಯುತು.
ನದಿಯಲ್ಲಿ ಹೂಳು ತುಂಬಿದೆ ಎಂಬ ಹಲವಾರು ಜನರ ಮಾತಿಗೆ ಇನ್ನಾದರೂ ಮುಕ್ತಿ ಸಿಗಬಹುದೇ?

More from the blog

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...