Monday, January 26, 2026

ವಿದ್ಯಾರ್ಥಿಗಳು ಓದುವ ಹವ್ಯಾಸ ಬೆಳಸಿ: ಸತೀಶ್ ಶೆಟ್ಟಿ

ಬಂಟ್ವಾಳ: ’ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ, ಪ್ರಾಂತೀಯ ಹಾಗೂ ಮಾತೃಭಾಷೆಗಳನ್ನು ತಿಳಿಯಿರಿ. ಪಠ್ಯ ಪುಸ್ತಕಗಳ ಜೊತೆಗೆ ಇತರ ಪುಸ್ತಕಗಳನ್ನೂ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಮಠದ ಸತೀಶ್ ಶೆಟ್ಟಿ ಅವರು ಹೇಳಿದ್ದಾರೆ. ಬಂಟ್ವಾಳದ ಬಿ.ಆರ್.ಎಂ.ಪಿ.ಸಿ.ಪಿ. ಶಾಲೆಯಲ್ಲಿ ಮಂಗಳೂರು ರಾಮಕೃಷ್ಣ ಆಶ್ರಮದ ಸಂಚಾರಿ ಗ್ರಂಥಾಲಯದ ಪುಸ್ತಕ ಪ್ರದರ್ಶನ ಹಾಗೂ ಮಾರಾಟ ನಿರ್ವಹಿಸಿ  ಮಾತನ್ನಾಡಿದ ಅವರು,   ಕಲಿತ ವಿದ್ಯೆ, ಪಡೆದ ಜ್ಞಾನ ಇವೇ ಮಾನವನ ಬೆಳವಣಿಗೆಗೆ ಪೂರಕ,ತಂದೆ ತಾಯಿಗಳನ್ನು ಗೌರವಿಸಿ. ಶಿಸ್ತಿನಿಂದ ಜೀವನವನ್ನು ರೂಪಿಸಿಕೊಳ್ಳಿ. ಸ್ವಚ್ಛತೆಯು ನಿಮ್ಮನ್ನು ಭಗವಂತನೆಡೆಗೆ ಒಯ್ಯುತ್ತದೆ’ ಎಂದು ಹೇಳಿದರು. . ಶಾಲಾ ಪ್ರಾಂಶುಪಾಲೆ ರಮಾಶಂಕರ್ ಸಿ. ಶುಭಾಶಂಸನೆಗೈದರು. ಆಸಕ್ತ ವಿದ್ಯಾರ್ಥಿಗಳು ರಾಮಕೃಷ್ಣ ಪರಮಹಂಸ, ವಿವೇಕಾನಂದ ಮೌಲ್ಯಾಧಾರಿತ ಪುಸ್ತಕಗಳನ್ನು ಖರೀದಿಸಿದರು. ಚಿತ್ರಕಲಾ ಶಿಕ್ಷಕ ಹರೀಶ್ ಆಚಾರ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...