Monday, July 14, 2025

ಶಿಕ್ಷಕ-ರಕ್ಷಕರ ಸಂಘದ ವಾರ್ಷಿಕ ಮಹಾಸಭೆ : ಶೇ.100 ಫಲಿತಾಂಶ ದಾಖಲಿಗೆ ಅಭಿನಂದನೆಗಳ ಮಹಾಪೂರ

ಬಂಟ್ವಾಳ : ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆ ಬಂಟ್ವಾಳ ಇದರ ಶಿಕ್ಷಕ-ರಕ್ಷಕರ ಸಂಘದ ವಾರ್ಷಿಕ ಮಹಾಸಭೆಯು ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದ ಸಭಾಂಗಣದಲ್ಲಿ ನಡೆಯಿತು. ಅತಿಥಿಯಾಗಿದ್ದ ಪುರಸಭೆಯ ಹಿರಿಯ ಸದಸ್ಯ,  ಶಾಲಾ ಸಂಚಾಲಕ ಎ.ಗೋವಿಂದ ಪ್ರಭು ಅವರು ಮಾತನಾಡಿ,ಪ್ರಸ್ತುತ ಸಾಲಿನಲ್ಲಿ ಯೋಗ ಸಹಿತ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಮಕ್ಕಳನ್ನು ಪ್ರೆರೇಪಿಸಲಾಗುತ್ತಿದೆ, ಶಾಲೆಯ ಅಭಿವೃದ್ದಿಯಲ್ಲಿ ಪೋಷಕರ ಸಹಕಾರವು ಅತ್ಯಗತ್ಯವಿದೆ ಎಂದರು.ಪ್ರಸಕ್ತ ವರ್ಷ ಸಹಿತ  ಹಲವು ವರ್ಷಗಳಿಂದ ಎಸ್. ಎಸ್. ಎಲ್. ಸಿ.  ಪರೀಕ್ಷೆಯಲ್ಲಿ ಶಾಲೆಗೆ ನಿರಂತರವಾಗಿ ಶೇ.100 ಫಲಿತಾಂಶ ದಾಖಲಾಗುತ್ತಿರುವುದು ಸಂತಸ ತಂದಿದ್ದು,ಇದಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕಿ – ಶಿಕ್ಷಕ ವೃಂದವನ್ನು ಗೋವಿಂದ ಪ್ರಭು ಅಭಿನಂದಿಸಿದರು.ಶ್ರೀ ತಿರುಮಲ ವೆಂಕಟರಮಣ ದೇವಳದ ಆಡಳಿತ ಮೊಕ್ತೇಸರಾದ ಪುರುಷೋತ್ತಮ ಶೆಣ್ಯೆ ಸಭಾಧ್ಯಕ್ಷತೆ ವಹಿಸಿದ್ದರು.ಮೊಕ್ತೇಸರ ಪ್ರವೀಣ್ ಕಿಣಿ,ಶಾಲಾ ಆಡಳಿತ ಮಂಡಳಿ ಸದಸ್ಯರಾದ ಶ್ರೀನಿವಾಸ ಪೈ,ಮಂಜುನಾಥ ಆಚಾರ್ಯ,ಪ್ರಕಾಶ್ ಪ್ರಭು,ವಸಂತಮಲ್ಯ,ರಿತೇಶ್ ಬಾಳಿಗಾ, ಶಿಕ್ಷಕ -ರಕ್ಷಕ ಸಂಘದ ಉಪಾಧ್ಯಕ್ಷೆ ಸುಪ್ರಿಯಾ ಭಟ್ ಮೊದಲಾದವರು ವೇದಿಕೆಯಲ್ಲಿದ್ದರು.

ಇದೇ ವೇಳೆ ಕೆಲ ಪೋಷಕರು ವಿವಿಧ ಸಲಹೆ,ಸೂಚನೆಗಳನ್ನಿತ್ತರಲ್ಲದೆ,ಪ್ರಸಕ್ತ ಸಾಲಿನಲ್ಲಿಯೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿರುವಲ್ಲಿ ಶ್ರಮಿಸಿದ ಶಿಕ್ಷಕ ವೃಂದವನ್ನು ಅಭಿನಂದಿಸಿದರು.                                                 ಶಿಕ್ಷಕಿ ಪ್ಲೋಸಿ ಲೋಬೋ ಮುಂದಿನ ಸಾಲಿನ ಅಯವ್ಯಯ ಮಂಡಿಸಿದರು.ಮುಖ್ಯೋಪಾಧ್ಯಾಯಿನಿ ರೋಶನಿ ತಾರಾ ಡಿಸೋಜ ಗತವರ್ಷದ ವರದಿ ವಾಚಿಸಿದರು. ಇನ್ನೊರ್ವ ಮುಖ್ಯೋಪಾಧ್ಯಾಯಿನಿ ಕುಸುಮಾವತಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಚಂದ್ರಹಾಸ್ ಎಂ.ವಂದಿಸಿದರು.ಶಿಕ್ಷಕ ಮುರಳೀಧರ್ .ಪಿ.ನಿರೂಪಿಸಿದರು.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...