Thursday, February 13, 2025

ಕಳ್ಳಿಗೆಯಲ್ಲಿ ರಸ್ತೆ ಅಗೆದು ತೊಂದರೆ: ಶಾಸಕರಿಂದ ಪರಿಶೀಲನೆ

ಬಂಟ್ವಾಳ: ಕಳ್ಳಿಗೆ ಗ್ರಾಮದ ಹೊಳ್ಳರಬೈಲು ಪ್ರದೇಶದ ತಿಮ್ಮಪ್ಪ ಪೂಜಾರಿ ಎಂಬವರ ಮನೆ ಸಮೀಪ ಸ್ಥಳೀಯ ನಿವಾಸಿಯೋರ್ವರು ಜೆಸಿಬಿ ಬಳಸಿ ರಸ್ತೆಯ ಒಂದು ಪಾರ್ಶ್ವವನ್ನು ಅಗೆದ ಪರಿಣಾಮ ಸ್ಥಳೀಯರಿಗಾದ ತೊಂದರೆಯ ದೂರಿನ ಹಿನ್ನಲೆಯಲ್ಲಿ ಶುಕ್ರವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಸ್ತೆ ಅಗೆದು  ಸಂಪರ್ಕ ರಸ್ತೆ ಕುಸಿಯುವ ಹಂತಕ್ಕೆ ತಲುಪಿದಲ್ಲದೆ ರಸ್ತೆ ಕಾಮಗಾರಿಯ ವೇಳೆ ಅಳವಡಿಸಿರುವ ಮೋರಿಯು ಅಸಮರ್ಪಕವಾಗಿದ್ದು, ಮಳೆ ನೀರು ಸರಾಗವಾಗಿ ಹರಿಯದೆ  ಕೃತಕ ನೆರೆಯಿಂದಾಗಿ ಮನೆಗೆ ನೀರು ನುಗ್ಗುತಿತ್ತು. ಈ ಬಗ್ಗೆ ಸ್ಥಳೀಯರ ನೀಡಿದ ದೂರಿಗೆ ಸ್ಪಂದಿಸಿದ  ಶಾಸಕ ದೂರು  ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತಕ್ಷಣ   ಜಿಪಂ ಕಿರಿಯ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಕೃಷ್ಣ ಅವರನ್ನು ಸ್ಥಳಕ್ಕೆ ಕರೆಸಿ,   ರಸ್ತೆಯನ್ನು ಉಳಿಸುವ ನಿಟ್ಟಿನಲ್ಲಿ ತಡೆಗೋಡೆಯನ್ನು ತುರ್ತಾಗಿ ನಿರ್ಮಿಸುವಂತೆ ಮತ್ತು ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿಕೊಡುವಂತೆ ಇಂಜಿನಿಯರ್ ಗೆ ಸೂಚಿಸಿದರು. ಕಳ್ಳಿಗೆ ಗ್ರಾಮದ ಹಲವು ಸಮಸ್ಯೆಗಳ ಬಗ್ಗೆಯು  ಸ್ಥಳೀಯರು   ಇದೇ ವೇಳೆ   ಶಾಸಕರ ಗಮನಕ್ಕೂ ತಂದರು.   ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ  ದೇವದಾಸ ಶೆಟ್ಟಿ,  ಕಳ್ಳಿಗೆ ಪಂಚಾಯತ್ ಪಿಡಿಓ ಮಾಲಿನಿ, ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್, ಯಶೋಧ ಜಾರಂದಗುಡ್ಡೆ, ರೇವತಿ ಮಾಡಂಗೆ, ಸರಸ್ವತಿ ನೆತ್ರಕೆರೆ, ಸ್ಥಳೀಯ ಮುಖಂಡರಾದ ದಾಮೋದರ್ ನೆತ್ರಕೆರೆ, ಜಗದೀಶ್ ಹೊಳ್ಳರಬೈಲು, ನವೀನ್ ಚಂದ್ರ ಶೆಟ್ಟಿ ಮುಂಡಾಜೆ, ಸುರೇಶ್ ಭಂಡಾರಿ ಅರ್ಬಿ, ಪುರುಷೋತ್ತಮ ಕೊಟ್ಟಾರಿ, ದೇವಿಪ್ರಸಾದ್ ಎಂ., ಚಂದ್ರಹಾಸ ನೆತ್ರಕೆರೆ ಮತ್ತಿತರರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...