Friday, July 11, 2025

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಗೆ ಕೇಂದ್ರದ ಪಾಲು ಇದೆಃ ಸಚಿವ ಜಿಗಜಿಣಗಿ

ಬಂಟ್ವಾಳ: ಕೇಂದ್ರ ಸಣ್ಣ ನೀರಾವರಿ ಸಚಿವ ರಮೇಶ್ ಜಿಗಜಿಣಗಿ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಯ ವತಿಯಿಂದ 36 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಸಂಗಬೆಟ್ಟು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ 18 ಕೋಟಿ ವೆಚ್ಚದಲ್ಲಿ ನರಿಕೊಂಬು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಯ ಕಾಮಗಾರಿ ಯನ್ನು ವೀಕ್ಷಣೆ ನಡೆಸಿದರು.
ಬಳಿಕ ಮಾತನಾಡಿದ ಅವರು ಸಂಗಬೆಟ್ಟು ಎಂಬಲ್ಲಿ ಈಗಾಗಲೇ ಪೂರ್ಣಗೊಂಡಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಹಳಷ್ಟು ಉತ್ತಮ ವಾಗಿದೆ, ಆದರೆ ಬೇಸಿಗೆ ಕಾಲದಲ್ಲಿ ಇಲ್ಲಿನ ಪಲ್ಗುಣಿ ನದಿಯಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಈ ನೀರಿನ ಸಮಸ್ಯೆ ನೀಗಿಸಲು 5 ಕೋಟಿ ವೆಚ್ಚದ ಹೊಸ ಡ್ಯಾಂ ನಿರ್ಮಾಣದ ಬೇಡಿಕೆ ಸಲ್ಲಿಕೆಯಾಗಿದೆ ಮುಂದಿನ ಬಜೆಟ್ ನಲ್ಲಿ ಹಣ ಬಿಡುಗಡೆಯಾದ ಕೂಡಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ ಎಂದರು.
ನಿರ್ಮಾಣ ಹಂತದಲ್ಲಿರುವ ನರಿಕೊಂಬು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ರುವ ಕಾಮಗಾರಿಯ ನ್ನು ಮಾರ್ಚ ಒಳಗಡೆ ಮುಗಿಸಲು ಸೂಚಿಸಿದ್ದೇನೆ.


ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಯ ಸರ್ವೆ ಕಾರ್ಯ ಇನ್ನೂ ಮುಗಿಯದ ಹಿನ್ನೆಲೆಯಲ್ಲಿ ರಸ್ತೆಯ ಇನ್ನೊಂದು ಬದಿಯ ಹಳ್ಳಿಗಳ ಮನೆಗಳಿಗೆ ನೀರು ನೀಡಲು ಸದ್ಯಕ್ಕೆ ಸಾಧ್ಯವಿಲ್ಲ, ಹಾಗಾಗಿ ರಸ್ತೆಯ ಈ ಬದಿಯಲ್ಲಿ ಇರುವ ಹಳ್ಳಿಗಳಿಗೆ ಮಾರ್ಚ ಬಳಿಕ ನೀರು ಕೊಡುವ ವ್ಯವಸ್ಥೆ ಮಾಡಲು ತಿಳಿಸಿದ್ದೇನೆ ಎಂದು ಅವರು ಹೇಳಿದರು.
ತಪ್ಪು ತಿಳಿವಳಿಕೆ: ರಾಜ್ಯ ಸರಕಾರದ ಕುಡಿಯುವ ನೀರಿನ ಯೋಜನೆ ಗೆ ಕೇಂದ್ರ ಸರಕಾರ ಸರಿಯಾಗಿ ಅರ್ಧ ಪಾಲು ಹಣ ನೀಡುತ್ತದೆ , ಆದರೆ ರಾಜ್ಯ ಸರಕಾರ ಮಾತ್ರ ಎಲ್ಲೂ ಹೇಳದೆ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ.ಕೇಂದ್ರ ಸರಕಾರ ನೀಡುವ ಹಣದ ಬಗ್ಗೆ ಇವರಿಗೆ ಹೇಳಲು ಏನು ನಾಚಿಕೆ ಎಂದು ಪ್ರಶ್ನಿಸಿದರು.ಈ ಸಂಧರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು, ಜಿ.ಪಂ.ಅಧ್ಯಕ್ಷೆ ಮೀನಾಕ್ಷೀ ಶಾಂತಿಗೂಡು, ನರಿಕೊಂಬು ಗ್ರಾ.ಪಂ.ಅದ್ಯಕ್ಷ ಯಶೋಧರ, ಜಿ.ಪಂ.ಸದಸ್ಯೆ ಕಮಲಾಕ್ಷೀ ಕೆ.ಪೂಜಾರಿ, ತಾ.ಪಂ ಸದಸ್ಯ ಪ್ರಭಾಕರು ಪ್ರಭು, ಪ್ರಮುಖರಾದ ಸುಲೋಚನ ಜಿ.ಕೆ.ಭಟ್, ಅನಂದ ಶಂಭೂರು, ಸುರೇಶ್, ರಮಾನಾಥ ರಾಯಿ, ಬಿ. ಉಶೋದ , ಕಿಶೋರ್ ಶೆಟ್ಟಿ, ಪ್ರೇಮನಾಥ್ ಶೆಟ್ಟಿ ಮತ್ತಿತರ ರು ಉಪಸ್ಥಿತರಿದ್ದರು

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...