ಬಂಟ್ವಾಳ: ಪೆರಾಜೆ ಗ್ರಾಮದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ನಿತಿನ್ ಅರ್ಬಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪೆರಾಜೆ ಶಾಲಾ ಆವರಣದಲ್ಲಿ ಶ್ರೀ ದೇವಿ ಟ್ರಸ್ಟ್ ಅಧ್ಯಕ್ಷ ಮಾದವ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ಕಾರ್ಯದರ್ಶಿಯಾಗಿ ಸುಧಾಕರ ಪಾನೋರ್, ಜತೆ ಕಾರ್ಯದರ್ಶಿಯಾಗಿ ನಿಶಾಂತ್ ಬೀರಕೋಡಿ, ಕ್ರೀಡಾ ಕಾರ್ಯದರ್ಶಿ ಪುರುಷೋತ್ತಮ ಕುಲಾಲ್ ಸಾದಿಕುಕ್ಕು ಹಾಗೂ 8 ಜನ ಕಾರ್ಯಕಾರಿ ಸಮಿತಿಯ ಆಯ್ಕೆ ಮಾಡಲಾಯಿತು.
