Saturday, January 31, 2026

ಜುಲೈ 14: ಅಕ್ಕಮಹಾದೇವಿ ಯಕ್ಷ ಕಲಾ ಕೇಂದ್ರ ಉದ್ಘಾಟನೆ

ಬಂಟ್ವಾಳ: ಇಲ್ಲಿನ ಅಜ್ಜಿಬೆಟ್ಟಿನಲ್ಲಿರುವ ಅಕ್ಕಮಹಾದೇವಿ ಶಿಶು ಮಂದಿರದಲ್ಲಿ ಅಜ್ಜಿಬೆಟ್ಟು, ಅಗ್ರಬೈಲು, ಸಂಚಯಗಿರಿ, ಕುಲಾಲ ಮಠ, ದೈಪಲ ಭಾಗದ ಯಕ್ಷಗಾನ ಅಭಿಮಾನಿಗಳು ಸೇರಿಕೊಂಡು ಅಕ್ಕಮಹಾದೇವಿ ಯಕ್ಷ ಕಲಾ ಕೇಂದ್ರ ರಚನೆಯಾಗಿದೆ. ಇದರ ಉದ್ಘಾಟನೆಯನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಿವರಾಮ್ ಜೋಗಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆ ಗಣೇಶ್ ಆಚಾರ್ಯ ಅಜ್ಜಿಬೆಟ್ಟು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹಿರಿಯ ಯಕ್ಷಗಾನ ಕಲಾವಿದ ದಾಮೋದರ ಆಚಾರ್ಯ, ಯಕ್ಷನಾಟ್ಯ ಗುರುಗಳಾದ ದಯಾನಂದ ಪಿಲಿಕೂರು, ವಿಜಿತ್ ಕುಮಾರ್ ಶೆಟ್ಟಿ, ಪ್ರಗತಿಪರ ಕೃಷಿಕ ಮೋಹನ ಅಗ್ರಬೈಲು ಮತ್ತು ಸ್ನೇಹಾಂಜಲಿ ಸೇವಾ ಸಂಘದ ಅಧ್ಯಕ್ಷ ಉದಯ ಕುಮಾರ್ ಅಜ್ಜಿಬೆಟ್ಟು ಭಾಗವಹಿಸಲಿದ್ದಾರೆ. ಪ್ರತೀ ಆದಿತ್ಯವಾರ ಬೆಳಿಗ್ಗೆ ಶಿಶು ಮಂದಿರದಲ್ಲಿ ಬೆಳಿಗ್ಗೆ 8ರಿಂದ 9ರ ವರೆಗೆ ಯಕ್ಷನಾಟ್ಯ ತರಗತಿಯು ನಡೆಯಲಿದೆ ಎಂದು ಯಕ್ಷಕಲಾ ಕೇಂದ್ರದ ಕಾರ್ಯದರ್ಶಿ ಚಂದ್ರಾವತಿ ಅಜ್ಜಿಬೆಟ್ಟು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...