Thursday, January 29, 2026

ವಿಯೆಟ್ನಾಂ ಮಾದರಿ ಕರಿಮೆಣಸು ಲಾಭದಾಯಕ ಎಂದ ಇಲ್ಟ್ರೆಕಲ್ ಉದ್ಯಮಿ, ಕೃಷಿಕ ಪಿಯೂಸ್ ಎಲ್ ರೋಡ್ರಿಗಸ್

ಬಂಟ್ವಾಳ: ಸಾಂಬಾರು ಬೆಳೆಗಳ ರಾಜ ಎಂದೇ ಕರೆಯಲ್ಪಡುವ ಕರಿಮೆಣಸು ಬಳ್ಳಿಯನ್ನು ವಿಯೆಟ್ನಾಂ ಮಾದರಿಯಲ್ಲಿ ಬೆಳೆಸುವ ಮೂಲಕ
ಇಲ್ಲೊಬ್ಬ ಪ್ರಗತಿಪರ ಕೃಷಿಕ, ಬಂಟ್ವಾಳ ತಾಲೂಕು ಬಿ.ಕಸ್ಬಾ ನಿವಾಸಿ ಪಿಯೂಸ್ ಎಲ್.ರೊಡ್ರಿಗಸ್ ಪರಿಚಯಿಸಿದ್ದಾರೆ.


ಯಾಕೆ ಇದಕ್ಕೆ ಈ ಹೆಸರು ಬಂತು ಎಂಬುದು ಇಲ್ಲಿನ ಕುತೂಹಲ. ವಿಯೆಟ್ನಾಂನಲ್ಲಿ ಮರವನ್ನು ಕಡಿದು ನಿರ್ದಿಷ್ಟ ಎತ್ತರದ ಕಂಬಗಳನ್ನು ಮಾಡಿ ಅದನ್ನು ನೆಲದಲ್ಲಿ ಹೂತು ಕರಿಮೆಣಸು ಕೃಷಿ ಪೂರ್ಣ ವೈಜ್ಞಾನಿಕ ಕ್ರಮದಲ್ಲಿ ಮಾಡುತ್ತಾರೆ.


ಇಲ್ಲಿ ಇನ್ನೂ ವಿಶಿಷ್ಟ ಎನ್ನುವಂತೆ ಅನುಪಯುಕ್ತ ಸಿಮೆಂಟ್ ಕಂಬಗಳನ್ನು ಬಳಸಿದ್ದಾರೆ. ಕಂಬಕ್ಕೆ ಐದು ಅಡಿಗಳಷ್ಟು ಎತ್ತರಕ್ಕೆ ನೆಟ್ ಬೇಲಿಯನ್ನು ಸುತ್ತಿ, ಅದರ ಒಳಗೆ ತೆಂಗಿನ ಸಿಪ್ಪೆಗಳ ಹುಡಿಯನ್ನು ತುಂಬಿಸಿದ್ದಾರೆ. ಕಂಬದ ಬುಡದಲ್ಲಿ ಬಳ್ಳಿಗಳನ್ನು ನೆಟ್ಟು ಹಬ್ಬಿಸುವ ಮೂಲಕ ವಿಶಿಷ್ಟತೆಯನ್ನು ಮೆರೆದಿದ್ದಾರೆ.
ದೀರ್ಘಾವಧಿ ಉಳಿದು ಫಸಲು ನೀಡುವ ಈ ಕೃಷಿಗೆ ಒಮ್ಮೆ ಮಾತ್ರ ವೆಚ್ಚವನ್ನು ಮಾಡಿ ನಂತರದ ದಿನಗಳಲ್ಲಿ ಅತ್ಯಲ್ಪ ಶ್ರಮದಿಂದ ಅಧಿಕ ಲಾಭವನ್ನು ಪಡೆಯಬಹುದು. ಇದರಲ್ಲಿ ಆರೈಕೆ ಶ್ರಮ ಕಡಿಮೆ. ವೆಚ್ಚ ನಗಣ್ಯ ಎಂಬಂತಿದೆ. ವಿದ್ಯುತ್ ಸರಬರಾಜು ನಿರುಪಯುಕ್ತ ಸಿಮೆಂಟ್ ಕಂಬಗಳನ್ನು ಬಳಸಿ ಅದಕ್ಕೆ ಐದು ಅಡಿಗಳಷ್ಟು ಎತ್ತರಕ್ಕೆ ಪ್ಲಾಸ್ಟಿಕ್ ನೆಟ್ ಸುತ್ತಿ, ಅದರ ಒಳಗೆ ತೆಂಗಿನ ಸಿಪ್ಪೆಗಳ ಹುಡಿಯನ್ನು ನೆಲದಿಂದ ಸುಮಾರು ಐದು ಅಡಿಗಳಷ್ಟು ತುಂಬಿಸಿ ಅದರಲ್ಲಿ ಕರಿಮೆಣಸು ಬಳ್ಳಿಗಳನ್ನು ಹಬ್ಬಿಸುವ ಮೂಲಕ ವಿಶಿಷ್ಟತೆಯನ್ನು ಮೆರೆದಿದ್ದಾರೆ.
ದೀರ್ಘಾವಧಿ ಉಳಿದು ಫಸಲು ನೀಡುವ ಕರಿಮೆಣಸು ಕೃಷಿಗೆ ಒಮ್ಮೆ ಮಾತ್ರ ವೆಚ್ಚವನ್ನು ಮಾಡಿದರೆ ಆಯಿತು. ನಂತರದ ದಿನಗಳಲ್ಲಿ ಅತ್ಯಲ್ಪ ಶ್ರಮದಿಂದ ಅಧಿಕ ಲಾಭವನ್ನು ಪಡೆಯಬಹುದು. ವಿಯೆಟ್ನಾಂನಲ್ಲಿ ಕಂಬಗಳನ್ನು ಹಾಕಿ ವೈಜ್ಞಾನಿಕ ಹಾಗೂ ತಾಂತ್ರಿಕ ಕ್ರಮದಲ್ಲಿ ಕರಿಮೆಣಸು ಬೆಳೆಯುತ್ತಾರೆ. ಅಲ್ಲಿನ ಕರಿಮೆಣಸು ಉತ್ಕೃಷ್ಟ ಗುಣಮಟ್ಟಕ್ಕೂ ಹೆಸರಾಗಿದೆ ಎನ್ನುತ್ತಾರೆ.
ಪ್ರಯೋಜನ ಸಾಮಾನ್ಯ ಸ್ಥಿತಿಯಲ್ಲಿ ಕರಿಮೆಣಸಿನ ಬಳ್ಳಿಯನ್ನು ನೆಲದಲ್ಲಿ ನೆಟ್ಟು ಯಾವುದೇ ಮರಕ್ಕೆ ಹಬ್ಬಿಸುವುದು ರೂಢಿಗತ ಕ್ರಮ. ಇದು ವರ್ಷಕ್ಕೆ ಎರಡು ಅಡಿಗಳಷ್ಟು ಎತ್ತರಕ್ಕೆ ಬೆಳೆಯಬಹುದು. ಆದರೆ ವಿಯೆಟ್ನಾಂ ಮಾದರಿಯಲ್ಲಿ ಸುಮಾರು ಐದು ಅಡಿಗಳಷ್ಟು ಎತ್ತರಕ್ಕೆ ಕೇವಲ ಆರು ತಿಂಗಳ ಅವಧಿಯಲ್ಲಿ ಬೆಳೆದಿರುವುದು ಇದರ ವಿಶೇಷತೆ.
ಗಿಡವು ಬೆಳೆದಂತೆ ಮತ್ತೆ ಕಂಬಕ್ಕೆ ಪ್ಲಾಸ್ಟಿಕ್ ನೆಟ್ ಸುತ್ತುವ ಮೂಲಕ ಶೀಘ್ರ ಮತ್ತಷ್ಟು ಮೇಲಕ್ಕೆ ಹಬ್ಬಿಕೊಳ್ಳಲು ಇದರಿಂದ ಅನುಕೂಲ ಆಗುತ್ತದೆ ಎಂದು ಪಿಯೂಸ್ ಅವರು ತಿಳಿಸುತ್ತಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...