Tuesday, July 1, 2025

ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಕಿಲೆಂದೂರು ಅವರಿಗೆ ಅವಹೇಳನ: ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಖಂಡನೆ

ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭಾನುವಾರ ಆಗಮಿಸಿದ ಸಚಿವ ಎಚ್ ಡಿ ರೇವಣ್ಣ ಅವರು ಮೂಲ್ಕಿ ವಲಯ ಪತ್ರಕರ್ತರ ಸಂಘದ ಅಧ್ಯಕ್ಷ ನಿಶಾಂತ್ ಕಿಲೆಂದೂರು ಅವರಿಗೆ ಅವಹೇಳನ ಮಾಡಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ. ಸಚಿವರ ಈ ದುಂಡಾವರ್ತನೆ ಪತ್ರಕರ್ತರ ಸಮುದಾಯಕ್ಕೆ ಮಾಡಿದ ಅವಮಾನವಾಗಿದೆ. ಘಟನೆ ಕುರಿತು ಸಚಿವರು ಕ್ಷಮೆ ಯಾಚಿಸಬೇಕು. ರಾಜ್ಯ ಸರಕಾರ ಮುಂದೆ ಈ ರೀತಿ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...