Tuesday, January 27, 2026

’ಅಡಕೆ ನಿಷೇಧದ ಬಗ್ಗೆ ಗೊಂದಲ ಬೇಡ’-ನಳಿನ್

ವಿಟ್ಲ: ಸನ್ಮಾನ ಅಭಿನಂದನೆಗಳು ಕಾರ್‍ಯಕರ್ತರಿಗೆ ಸಲ್ಲಬೇಕಾದ್ದು, ಅವರ ಪರಿಶ್ರಮದ ಫಲವಾಗಿ ನಮ್ಮ ವಿಜಯವಾಗಿದೆ. ಭ್ರಷ್ಟಾಚಾರದಿಂದ ರೋಸಿ ಹೋದ ಜನರು ಮೋದಿಯವರನ್ನು ಆಯ್ಕೆ ಮಾಡಿದ್ದು, ಅವರ ಆಡಳಿತವನ್ನು ಮೆಚ್ಚಿ ಮತ್ತೆ ಜನರು ಆಯ್ಕೆ ಮಾಡಿದ್ದಾರೆ. ವಿಸ್ತಾರವಾದ ಆಡಳಿತ ವ್ಯವಸ್ಥೆಯಲ್ಲಿ ಲೋಕಸಭಾ ಸದಸ್ಯನ ಇತಿ ಮಿತಿಯಲ್ಲಿ ಕೆಲಸ ಕಾರ್‍ಯಗಳನ್ನು ಮಾಡುತ್ತೇನೆ. ಅಡಕೆ ನಿಷೇಧದ ಬಗ್ಗೆ ಬೆಳೆಗಾರರು ಯಾವುದೇ ಗೊಂದಲ ಪಡಬೇಕಾಗಿಲ್ಲ. ಅಡಕೆ ಆಹಾರ ವಸ್ತು ಎಂದು ಮಾಡಲು ಮೋದಿ ಸರಕಾರ ಬದ್ಧವಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ವಿಟ್ಲ ನಗರ ಬಿಜೆಪಿ ಸಮಿತಿ ವತಿಯಿಂದ 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ದುಡಿದ ಕಾರ್‍ಯಕರ್ತರಿಗೆ, ಪೇಜ್ ಪ್ರಮುಖರಿಗೆ ಹಾಗೂ ಮತದಾರ ಬಾಂಧವರಿಗೆ ಅಭಿನಂದನಾ ಕಾರ್‍ಯಕ್ರಮದಲ್ಲಿ ಮಾತನಾಡಿದರು.
ಕರ್ನಾಟಕ ಸರಕಾರದ ಒಂದು ವರ್ಷದ ಆಡಳಿತ ವೈಖರಿಯಿಂದ ಅವಶ್ಯಕ ಕೆಲಸ ಮಾಡಿಸಲೂ ಬೇಕಾದ ಹಣ ಇಲ್ಲದ ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್ ಶಾಸಕರಿಗೆ ಅವರ ನಾಯಕರ ಮೇಲೆಯೇ ವಿಶ್ವಾಸ ಇಲ್ಲದ ಪರಿಸ್ಥಿತಿ ನಿರ್‍ಮಾಣವಾಗಿದೆ. ಮುಂದಿನ ಒಂದು ತಿಂಗಳ ಒಳಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಆಗುವುದು ನಿಶ್ಚಿತ ಎಂದರು.

ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ ವೈಯಕ್ತಿಕ ಅಭಿಪ್ರಾಯಕ್ಕಿಂತ ದೇಶದ ಹಿತ ಮುಖ್ಯ ಎಂಬುದನ್ನು ತಿಳಿಯಬೇಕು. ದೇಶದ ಏಕತೆ ಸಮಗ್ರತೆಗಾಗಿ ಕಾರ್‍ಯಕರ್ತರು ದುಡಿದು ಮೋದಿಯವರನ್ನು ಗೆಲ್ಲಿಸಿದ್ದಾರೆ. ಎಲ್ಲರ ವಿಕಾಸವನ್ನು ಬಯಸಿದ ಪ್ರಧಾನಿ, ಕಟ್ಟ ಕಡೆಯ ವ್ಯಕ್ತಿಗೂ ಅಗತ್ಯವಾದ ಯೋಜನೆಯನ್ನು ನೀಡಿದ್ದಾರೆ. ಬಿಜೆಪಿಗೆ ತಂತ್ರ ಕುತಂತ್ರ ಮಾಡಿ ಅಧಿಕಾರ ಮಾಡುವ ಅಗತ್ಯವಿಲ್ಲ. ಸ್ವ-ಇಚ್ಛೆಯಿಂದ ಬರುವವರವನ್ನು ಸ್ವಾಗತಿಸದೇ ಬಿಜೆಪಿ ಸುಮ್ಮನೆ ಕೂರುವುದಿಲ್ಲ. ಜನರ ಪ್ರೀತಿ ವಿಶ್ವಾಸವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.
ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತನಾಡಿದರು. ಪಕ್ಷದ ಹಿರಿಯ ಕಾರ್‍ಯಕರ್ತರಾದ ಸಂಕಪ್ಪ ಗೌಡ, ಜತ್ತಪ್ಪ ಗೌಡ, ರಮಾನಾಥ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಪ್ರಧಾನ ಮಂತ್ರಿಗಳ ಉಜ್ವಲ ಗ್ಯಾಸ್ ಯೋಜನೆಯ ಫಲಾನುಭವಿಗಳಿಗೆ ಗ್ಯಾಸ್ ವಿತರಿಸಲಾಯಿತು. 18 ವಾರ್ಡಿನ ಪೇಜು ಪ್ರಮುಖರನ್ನು ಗೌರವಿಸಲಾಯಿತು. ದೇಶ ಪ್ರೇಮಿ ಇಬ್ರಾಹಿಂ ಮಾಮೇಶ್ವರ ಅವರ ಮೊಬೈಲ್ ಟೀ ಕ್ಯಾಂಟೀನ್‌ಗೆ ಚಾಲನೆ ನೀಡಲಾಯಿತು.
ಪುತ್ತೂರು ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ರಾಜೀವ ಭಂಡಾರಿ, ವಿಟ್ಲ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಂತ ವಿಟ್ಲ, ಮಂಡಲ ಪ್ರಧಾನ ಕಾರ್‍ಯದರ್ಶಿ ಶಂಭು ಭಟ್, ಹೆಚ್. ಜಗನ್ನಾಥ ಸಾಲ್ಯಾನ್, ನಗರ ಸಮಿತಿ ಉದಯಕುಮಾರ್ ಆಲಂಗಾರು ಉಪಸ್ಥಿತರಿದ್ದರು.
ನಗರ ಸಮಿತಿ ಅಧ್ಯಕ್ಷ ಮೋಹನದಾಸ ಸ್ವಾಗತಿಸಿದರು. ವಿಟ್ಲ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಅರುಣ್ ಎಂ ವಿಟ್ಲ ವಂದಿಸಿದರು. ಹರೀಶ್ ವಿಟ್ಲ ಕಾರ್‍ಯಕ್ರಮ ನಿರೂಪಿಸಿದರು.

More from the blog

Bantwal : ರಥಸಪ್ತಮಿಯ ಪ್ರಯುಕ್ತ 108 ಸೂರ್ಯ ನಮಸ್ಕಾರ ಕಾರ್ಯಕ್ರಮ

ಬಂಟ್ವಾಳ : ಸಂಸ್ಕಾರ ಸಂಘಟನೆ ಸೇವೆಯ ಧ್ಯೇಯ ಉದ್ದೇಶಗಳನ್ನು ಹೊಂದಿರುವ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ( ರಿ) ಕರ್ನಾಟಕ ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಮಂಗಳೂರು, ಬಂಟ್ವಾಳ ತಾಲೂಕು ವತಿಯಿಂದ ಜ....

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...