Saturday, February 15, 2025

“ಕರ್ನಾಟಕ ಮಲ್ಲ” ಸಂಪಾದಕ ಚಂದ್ರಶೇಖರ್ ಪಾಲೆತ್ತಾಡಿಯವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋಧ್ಯಮ ಪ್ರಶಸ್ತಿ

 ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಮಲೆನಾಡು ಪುತ್ತೂರಿನ ಬಜತ್ತೂರು ಗ್ರಾಮದ ಕೃಷಿ ಕುಟುಂಬದ ಮೂಲದ ಚಂದ್ರಶೇಖರ್ ಪಾಲೆತ್ತಾಡಿಯವರು ರೈತಪರ ಚಳವಳಿ, ನಾಟಕ, ಯಕ್ಷಗಾನ, ಭಾಷಣ, ಹಿಗೆ ನಾನಾ ರೂಪದಲ್ಲಿ ತನ್ನ ಬಹುತ್ವಗಳಲ್ಲಿ ಕಾಣಿಸಿಕೊಂಡವರು. ನೈಜ ಸಮಾಜವಾದ ತನ್ನ ಮೌಲ್ಯವನ್ನ ಕಳೆದುಕೊಳ್ಳುತ್ತಿರುವ ಈ ಹೊತ್ತಿಗೆ ಕೆಲವೇ ಕೆಲವು ನೈಜ ಸಮಾಜವಾದ ಪರಿಪಾಲಕರನ್ನ ನಾವು ನೋಡಬಹುದಾದರೆ ಅದರಲ್ಲಿ ಪಾಲೆತ್ತಾಡಿಯವರೂ ಒಬ್ಬರು. ವಡ್ಡರ್ಸೆ ರಘುರಾಮ ಶೆಟ್ಟರಂತೆಯೇ ಪತ್ರಿಕಾರಂಗದಲ್ಲಿ ಭಿನ್ನ ದೃಷ್ಠಿಕೋನದೊಂದಿಗೆ ಸಾಗಿ ಬಂದವರು ಪಾಲೆತ್ತಾಡಿ. ಹೊಸದಿಗಂತ, ಮಂಗಳೂರು ಮಿತ್ರ, ಕರ್ನಾಟಕ ಮಲ್ಲ, ಉದಯದೀಪ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ ಕೊನೆಗೆ ಕರ್ನಾಟಕ ಮಲ್ಲ ಪತ್ರಿಕೆಯ ಸಂಪಾದಕ ವೃತ್ತಿಯ ತನಕ ನಡೆದು ಬಂದ ಪಾಲೆತ್ತಾಡಿಯವರ ಹೆಸರನ್ನ ಮುಂಬೈನಲ್ಲಿ ತಿಳಿಯದವರಿಲ್ಲ. ಮರಾಠಿ ಮಣ್ಣು ಮುಂಬೈನಲ್ಲಿ ಕನ್ನಡದ ಕಂಪನ್ನು ಧಟ್ಟವಾಗಿ ಹಲವಾರು ಸವಾಲುಗಳ ನಡುವೆಯೂ ಪಸರಿಸಿದ ಚಂದ್ರಶೇಖರ್ ಪಾಲೆತ್ತಾಡಿಯವರು ಪರರಾಜ್ಯವೊಂದರಲ್ಲಿ ಕನ್ನಡ ಭಾಷೆಯ ಪ್ರಾದೇಶಿಕ ಪತ್ರಿಕೆಯೊಂದು ಆ ರಾಜ್ಯದ ಪತ್ರಿಕೆಗಳಿಗೆ ಸರಿಸಮಾನವಾಗಿ ಪ್ರಸರಣವನ್ನ ಹೊಂದುವಲ್ಲಿ ಪಟ್ಟ ಶ್ರಮ ತೊಟ್ಟ ಛಲ ವರ್ಣಿಸಲಸದಳ. ಕನ್ನಡ ಪತ್ರಿಕಾರಂಗ ಗಟ್ಟಿ ಧ್ವನಿಯಾದ ಚಂದ್ರಶೇಖರ್ ಪಾಲೆತ್ತಾಡಿಯವರ ಪತ್ರಿಕಾರಂಗದ ಜೀವಮಾನದ ಸಾಧನೆಯನ್ನು ಗುರುತಿಸಿ ಪ್ರತಿಷ್ಠಿತ ವಡ್ಡರ್ಸೆ ರಘುರಾಮ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತೋಷದ ಸಂಗತಿ.

More from the blog

ವಿಟ್ಲದ ಭಗವಾನ್‌ ಶ್ರೀ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ

ವಿಟ್ಲ: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪರಿಸರದಲ್ಲಿ ಜೈನ ಧರ್ಮದವರು ಪುರಾತನ ಕಾಲದಲ್ಲಿ ನಿರ್ಮಿಸಿದ ಭಗವಾನ್‌ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯು ಪಂಚಕಲ್ಯಾಣ ಮಹೋತ್ಸವ ಆರಂಭಗೊಂಡಿತು. ಫೆ. 13 ರಿಂದ ಫೆ....

ಕೆ.ಎನ್.ಆರ್.ಸಿ.ಕಂಪೆನಿ ಅಧಿಕಾರಿಗಳ ವಿರುದ್ದ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು..

ಬಂಟ್ವಾಳ: ಖಾಸಗಿ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮಣ್ಣು ಅಗೆದು ನಷ್ಟ ಮಾಡಿದ್ದಾರೆ ಎಂದು ಖಾಸಗಿ ಕಂಪೆನಿ ಮೇಲೆ ಬಂಟ್ವಾಳ ‌ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‌ರಾಷ್ಟ್ರೀಯ ಹೆದ್ದಾರಿ ಬಿಸಿರೋಡು- ಅಡ್ಡಹೊಳೆ ಚತುಷ್ಪತ...

ಡೆತ್ ನೋಟ್ ನೀಡಿದ ಮಹತ್ವದ ಸುಳಿವು: ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

ಡೆತ್ ನೊಟ್ ನೀಡಿದ ಸುಳಿವು ಸ್ನೇಹಿತರ ಪಾಲಿಗೆ ಯಮಸ್ವರೂಪಿಯಾದರೆ , ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬಹುದಾ? ..... ಕಳೆದ ಮೂರು ದಿನಗಳ ಹಿಂದೆ ನಡೆದ ಅವಿವಾಹಿತ ಯುವಕನ ಆತ್ಮಹತ್ಯೆ ಹಿಂದೆ ಲಕ್ಷಾಂತರ ರೂ ಹಣದ ವಹಿವಾಟಿನ...

ಮಾ.1 ರಿಂದ 7 ರ ವರೆಗೆ ಪೊಳಲಿಯಲ್ಲಿ ಶತಚಂಡಿಕಾಯಾಗ ಹಾಗೂ ದೊಡ್ಡರಂಗ ಪೂಜೆ

ಬಂಟ್ವಾಳ: ಲೋಕಕಲ್ಯಾಣಾರ್ಥ ಹಾಗೂ ಸಾನಿಧ್ಯ ವೃದ್ದಿಗಾಗಿ ಮಾ.1 ರಿಂದ ಮಾ.07 ರ ವರೆಗೆ ಪೊಳಲಿ ಶ್ರೀ ದುರ್ಗಾಪರಮೇಶ್ವರಿ ರಾಜರಾಜೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಬ್ರಹ್ಮ ಶ್ರೀ ವೇದಮೂರ್ತಿ ಪೊಳಲಿ ಶ್ರೀ ಕೃಷ್ಣ ತಂತ್ರಿಗಳ ಮಾರ್ಗರ್ಶನದಲ್ಲಿ...